ಬೆಂಗಳೂರು: ಭಾರತದಾದ್ಯಂತ ಇಂದು ಸಂವಿಧಾನ ದಿನವನ್ನು ಆಚರಿಸಲಾಗುತ್ತಿದೆ.
ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಬಿಜೆಪಿ ನಾಯಕ ಬಿಎಸ್ ಯಡಿಯುರಪ್ಪನವರು,
ಡಾ ಬಾಬಾ ಸಾಹೇಬ ಅಂಬೇಡ್ಕರ್ ಅವರು ವಿಶ್ವದಲ್ಲೇ ಅತಿ ಶ್ರೇಷ್ಠ ಎನಿಸಿಕೊಂಡಿರುವ ಸಂವಿಧಾನವನ್ನು ದೇಶಕ್ಕೆ ನೀಡಿದ ದಿನವಾಗಿದೆ, ರಾಷ್ಟ್ರದ ಉದ್ದಗಲಕ್ಕೆ ಇವತ್ತಿನ ದಿನವನ್ನು ಸಂವಿಧಾನ ದಿನವಾಗಿ ಅಚರಿಸಲಾಗುತ್ತದೆ ಎಂದು ಹೇಳಿದರು.