Breaking News

ಬಾರ್​ಗೆ ಪರವಾನಗಿ ನೀಡಲು ಲಂಚ ಕೇಳಿದ ಆರೋಪ, ಎಫ್​ಐಆರ್ ದಾಖಲಾದರೆ ಚಲುವರಾಯಸ್ವಾಮಿಗೂ ಸಂಕಷ್ಟ

Spread the love

ಮಂಡ್ಯ, ನವೆಂಬರ್ 29: ಮಂಡ್ಯದ ಚಂದೂಪುರದಲ್ಲಿ ಬಾರ್ ಆ್ಯಂಡ್ ರೆಸ್ಟೋರೆಂಟ್​​ಗೆ ಪರವಾನಗಿ ನೀಡಲು ಲಂಚ ಕೇಳಿದ ಪ್ರಕರಣ ಸಂಬಂಧ ನೀಡಲಾಗಿರುವ ದೂರಿನ ಜತೆ ಸಲ್ಲಿಕೆಯಾಗಿರುವ ಆಡಿಯೋ ಮತ್ತು ವಿಡಿಯೋ ಸಾಕ್ಷ್ಯದ ಸತ್ಯಾಸತ್ಯತೆ ಅರಿಯಲು ಲೋಕಾಯುಕ್ತ ಮುಂದಾಗಿದೆ. ಎಫ್​ಐಆರ್​ ದಾಖಲಿಸುವ ಮುನ್ನವೇ ಲೋಕಾಯುಕ್ತ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಒಂದು ವೇಳೆ ಎಫ್​ಐಆರ್ ದಾಖಲಾದರೆ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿಗೂ ಸಂಕಷ್ಟ ಎದುರಾಗಲಿದೆ. ಯಾಕೆಂದರೆ, ದೂರುದಾರರು ಸಲ್ಲಿಸಿರುವ ಆಡಿಯೋ ಸಂಭಾಷಣೆಯಲ್ಲಿ ಸಚಿವ ಸಲುವರಾಯಸ್ವಾಮಿ ಬಗ್ಗೆಯೂ ಪ್ರಸ್ತಾಪವಾಗಿದೆ.

ದೂರುದಾರ ಸಲ್ಲಿಸಿರುವ ಅಧಿಕಾರಿ ಮತ್ತು ದೂರುದಾರನ ಮಧ್ಯೆ ನಡೆದಿದೆ ಎನ್ನಲಾದ ಸಂಭಾಷಣೆಯಲ್ಲಿ ಸಚಿವರ ಬಗ್ಗೆ ಪ್ರಸ್ತಾಪವಾಗಿದೆ. ಈ ವಿಚಾರ ಇಟ್ಟುಕೊಂಡು ಚಲುವರಾಯಸ್ವಾಮಿ ವಿರುದ್ಧ ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.

ಲಂಚದಲ್ಲಿ ಸಚಿವರಿಗೂ ಪಾಲು: ಜೆಡಿಎಸ್ ವಾಗ್ದಾಳಿ

ಬಾರ್ ಲೈಸೆನ್ಸ್​ನಲ್ಲಿಯೂ ಲಂಚ ವಸೂಲಿ ನಡೆಯುತ್ತಿದೆ. ಸಚಿವರ ಮುಂದಾಳತ್ವದಲ್ಲೇ ಅಧಿಕಾರಿಗಳು ರೇಟ್ ಫಿಕ್ಸ್ ಮಾಡಿದ್ದಾರೆ. ಈ ಭ್ರಷ್ಟಾಚಾರದಲ್ಲಿ ಸಚಿವರಿಗೂ ಪಾಲು ಹೋಗುತ್ತದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಗಂಭೀರ ಆರೋಪ ಮಾಡಿದೆ.


Spread the love

About Laxminews 24x7

Check Also

ಫೆ.9ರಿಂದ ಮೆಟ್ರೋ ದರ ಏರಿಕೆಗೆ ಸರ್ಕಾರ ಒಪ್ಪಿಗೆ?

Spread the loveಬೆಂಗಳೂರು: ಮೆಟ್ರೋ  ಪ್ರಯಾಣಿಕರಿಗೆ ಮತ್ತೊಮ್ಮೆ ಶಾಕ್ ಎದುರಾಗಿದೆ. ಫೆಬ್ರವರಿ 9ರಿಂದ ಮತ್ತೆ ಮೆಟ್ರೋ ದರ ಏರಿಕೆಯಾಗುವ ಸಾಧ್ಯತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ