Breaking News

ಭೀಮಪ್ಪ ಗಡಾಡ ಆರೋಪದಲ್ಲಿ ಯಾವುದೇ ಹುರುಳಿಲ್ಲ:- ಖಾನಾಪೂರ ತಹಶೀಲ್ದಾರ್ ಪ್ರಕಾಶ್ ಗಾಯಕವಾಡ ಸ್ಪಷ್ಟಣೆ

Spread the love

ಭೀಮಪ್ಪ ಗಡಾಡ ಆರೋಪದಲ್ಲಿ ಯಾವುದೇ ಹುರುಳಿಲ್ಲ:- ಖಾನಾಪೂರ ತಹಶೀಲ್ದಾರ್ ಪ್ರಕಾಶ್ ಗಾಯಕವಾಡ ಸ್ಪಷ್ಟಣೆ

ಭೀಮಪ್ಪ ಗಡಾಡ ಆರೋಪದಲ್ಲಿ ಯಾವುದೇ ಹುರುಳಿಲ್ಲ

ಖಾನಾಪೂರ ತಹಶೀಲ್ದಾರ್ ಪ್ರಕಾಶ್ ಗಾಯಕವಾಡ ಸ್ಪಷ್ಟಣೆ

ಸರಕಾರದ ನಿಯಮವನ್ನು ಗಾಳಿಗೆ ತೂರಿ ಗ್ರಾಮದ ಜಮೀನಿನ ಅವ್ಯವಹಾರ ಮಾಡಲಾಗಿದೆ ಎಂಬ ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ಖಾನಾಪೂರ ತಹಶೀಲ್ದಾರ್ ಪ್ರಕಾಶ್ ಗಾಯಕವಾಡ ಸ್ಪಷ್ಟಪಡಿಸಿದ್ದಾರೆ.

V. O.ಖಾನಾಪೂರ ತಾಲೂಕಿನ ಜಾಂಬೋಟಿಯ ಹುಳಂದ ಗ್ರಾಮಸ್ಥರಿಗೆ ಸೇರಿದ ರಿ.ಸ.ನಂ 03 ಕ್ಷೇತ್ರ 508ಎಕರೆ 20 ಗುಂಟೆ ಇದರ ಕಾಲಂ ನಂ11ಹಾಗೂ 2ರಲ್ಲಿ ಊರಿನ ಎಲ್ಲ ಜನರು ಎಂದು ದಾಖಲಾಗಿದೆ.ಆದರೆ ಇದಕ್ಕೆ ಪೂರಕವಾಗಿ ಖಾನಾಪೂರ ತಹಶೀಲ್ದಾರರು ಸರಕಾರದ ನಿಯಮ ಗಾಳಿಗೆ ತೂರಿ ಪಹಣಿ ಪತ್ರದಲ್ಲಿ ದಾಖಲಿರುವ ಊರಿನ ಎಲ್ಲ ಜನರು ಎಂಬ ಹೆಸರು ಕಡಿಮೆ ಮಾಡಲು ಆದೇಶ ಮಾಡುವುದರ ಮೂಲಕ ಗಂಭೀರವಾದ ಕರ್ತವ್ಯಲೋಪ ಎಸಗಿದ್ದಾರೆ ಎಂಬ ಆರೋಪವನ್ನು ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾಡ ಅವರು ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಡಿದರು.

ಇದಕ್ಕೆ ಸಂಬಂಧಿಸಿದಂತೆ ಖಾನಾಪೂರ ತಹಶೀಲ್ದಾರ್ ಪ್ರಕಾಶ್ ಗಾಯಕವಾಡ ಅವರು ಸ್ಪಷ್ಟತೆಯನ್ನು ನೀಡಿದ್ದು ಭೀಮಪ್ಪ ಗಡಾಡ ಅವರು ನನ್ನ ಮೇಲೆ ಮಾಡಿರುವ ಆರೋಪ ಸತ್ಯಕ್ಕೆ ದೂರವಾಗಿದೆ ನಾವು ನ್ಯಾಯಾಲಯದ ಆದೇಶದ ಪಾಲಿಸಿದ್ದೆವೆ ಮಾನ್ಯ ನ್ಯಾಯಾಲಯದ ಆದೇಶದಂತೆ ಯಾವುದೇ ಮ್ಯುಟೇಶನ್ ಇಲ್ಲದೇ ತಾಲೂಕಿನ ಜಾಂಬೋಟಿಯ ಹುಳಂದ ಗ್ರಾಮಕ್ಕೆ ಸೇರಿದ ರಿ.ಸ.ನಂ 03ಪಹಣಿಯಲ್ಲಿ ಪೋಕಳಾಗಿ ನಮೂದಾಗಿರುವುದನ್ನು ಕಾನೂನು ಪ್ರಕಾರ ಕಡಿಮೆ ಮಾಡಲಾಗಿದೆ ಇದರಲ್ಲಿ ಯಾವುದೇ ಕರ್ತವ್ಯ ಲೋಪ ಎಸಗಿರುವುದಿಲ್ಲ ಎಂದು ಸ್ಪಷ್ಟಪಡಿಸಿದರು


Spread the love

About Laxminews 24x7

Check Also

ತಂದೆಗೆ ಲಿವರ್ ದಾನ ಮಾಡಿ ಮಹಾದಾನಿ ಆದ ಮಗ

Spread the loveಬೆಳಗಾವಿ: ಲಿವರ್ ಸಂಪೂರ್ಣವಾಗಿ ನಿಷ್ಕ್ರೀಯವಾಗಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ರೋಗಿಗೆ ಯಶಸ್ವಿ ಲಿವರ್ ಕಸಿ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಿ ಜೀವವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ