Breaking News

ಯತ್ನಾಳ್ ಹಣೆಯಲು ವಿಜಯೇಂದ್ರ ಬಣ ಸಜ್ಜು

Spread the love

ಬೆಂಗಳೂರು, (ನವೆಂಬರ್ 29): ಕರ್ನಾಟಕ ಬಿಜೆಪಿಯಲ್ಲಿ ಅಂತರ್ಯುದ್ಧ, ಬಣ ಬಡಿದಾಟ ಜೋರಾಗಿದೆ. ಶಾಸಕ ಬಸನಗೌಡ ಪಾಟೀಲ್​ ಮತ್ತು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನಡುವಿನ ಬಹಿರಂಗ ಆರೋಪ-ಪ್ರತ್ಯಾರೋಪಗಳು ಜೋರಾಗಿದ್ದು, ಇದು ದೆಹಲಿಯ ಹೈಕಮಾಂಡ್​ ನಾಯಕರ ಗಮನಕ್ಕೂ ಬಂದಿದೆ. ಎಲ್ಲವನ್ನೂ ಅರಿತ ವರಿಷ್ಠರು ಇದೀಗ ಬಣ ಕಿತ್ತಾಟಕ್ಕೆ ಬ್ರೇಕ್​ ಹಾಕುವುದಕ್ಕೆ ಟೈಂ ಫಿಕ್ಸ್ ಮಾಡೇ ಬಿಟ್ಟಿದ್ದಾರೆ. ಡಿಸೆಂಬರ್​​ನಲ್ಲಿ ನಡೆಯಲಿರುವ ಕೋರ್ ಕಮಿಟಿ ಸಭೆಯಲ್ಲಿ ಎಲ್ಲವನ್ನೂ ಚರ್ಚೆ ಮಾಡಿ ಹೈಕಮಾಂಡ್​ ಗಮನಕ್ಕೆ ತರಲು ಪ್ಲ್ಯಾನ್​ ಮಾಡಲಾಗಿದೆ. ಇದರ ಮಧ್ಯೆಯೇ ಇದೀಗ ಶಾಸಕ ಯತ್ನಾಳ್ ಪ್ರತ್ಯೇಕ ಹೋರಾಟಕ್ಕೆ ಕೌಂಟರ್ ಆಗಿ ವಿಜಯೇಂದ್ರ ಆಪ್ತರು ಬೃಹತ್ ಸಮಾವೇಶಕ್ಕೆ ಸಜ್ಜಾಗಿದ್ದಾರೆ.

ದೇಗುಲಗಳ ಭೇಟಿ ನೆಪದಲ್ಲಿ ತಂತ್ರ ಹೆಣೆದ ವಿಜಯೇಂದ್ರ ತಂಡ!

ಬೀದರ್​ನಿಂದ ವಕ್ಫ್​ ವಿರುದ್ಧ ಹೋರಾಟ ಆರಂಭಿಸಿರುವ ಬಸನಗೌಡ ಪಾಟೀಳ್ ಯತ್ನಾಳ್​, ಜಾಗೃತಿ ಅಭಿಯಾನ 5ನೇ ದಿನಕ್ಕೆ ಕಾಲಿಟ್ಟಿದೆ. ಇದಕ್ಕೆ ಕೌಂಟರ್ ಆಗಿಯೇ ಇದೀಗ ವಿಜಯೇಂದ್ರಗೆ ಎಂ.ಪಿ.ರೇಣುಕಾಚಾರ್ಯ ಟೀಂ ಬೆನ್ನಿಗೆ ನಿಂತಿದ್ದು, ಶೀಘ್ರದಲ್ಲೇ ವಿಜಯೇಂದ್ರ ಪರ ದಾವಣಗೆರೆಯಲ್ಲಿ ಬೃಹತ್ ಸಮಾವೇಶಕ್ಕೆ ತಯಾರಿ ನಡೆಸಿದ್ದಾರೆ. ಇದರ ಮೊದಲ ಭಾಗವಾಗಿಯೇ ಟೆಂಪನ್ ರನ್​ ಶುರು ಮಾಡಿಕೊಂಡಿದ್ದಾರೆ.


Spread the love

About Laxminews 24x7

Check Also

ಬಿಜೆಪಿ-ಜೆಡಿಎಸನಲ್ಲಿ ಅಸಮಾಧಾನಗೊಂಡ ಕಾರ್ಯಕರ್ತರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ ಏನಂದ್ರು??

Spread the loveಜ್ಯಾತ್ಯಾತೀತವಾಗಿ ಕಾಂಗ್ರೆಸ್ ಸಿದ್ಧಾಂತಗಳನ್ನು ಒಪ್ಪಿ ಬರುವ ಕಾರ್ಯಕರ್ತರಿಗೆ ಪಕ್ಷದಲ್ಲಿ ಸ್ವಾಗತವಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ