Breaking News

ವಕ್ಫ್ ಭೂ ಕಬಳಿಕೆ ವಿರೋಧಿಸಿ ಬಿಜೆಪಿ ಪಕ್ಷ ರಾಜ್ಯಾದ್ಯಂತ ಹೋರಾಟ ನಡೆಸಿದ್ದು ಡಿಸೆಂಬರ್ 1 ರಂದು ಬೆಳಗಾವಿಯಲ್ಲಿ ಬೃಹತ್ ಜನಜಾಗೃತಿ ಹೋರಾಟ

Spread the love

ವಕ್ಫ್ ಭೂ ಕಬಳಿಕೆ ವಿರೋಧಿಸಿ ಬಿಜೆಪಿ ಪಕ್ಷ ರಾಜ್ಯಾದ್ಯಂತ ಹೋರಾಟ ನಡೆಸಿದ್ದು ಡಿಸೆಂಬರ್ 1 ರಂದು ಬೆಳಗಾವಿಯಲ್ಲಿ ಬೃಹತ್ ಜನಜಾಗೃತಿ ಹೋರಾಟ ನಡೆಯಲಿದ್ದು ಈ ಹೋರಾಟದಲ್ಲಿ ರಾಜ್ಯದ ಬಿಜೆಪಿ ನಾಯಕರು ಭಾಗವಹಿಸಲಿದ್ದಾರೆ.

ಈ ಕುರಿತು ಬೆಳಗಾವಿಯ ಹೊಟೇಲ್ ಒಂದರಲ್ಲಿ ಪೂರ್ವಭಾವಿ ಸಭೆ ನಡೆಸಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬೆಳಗಾವಿಯಲ್ಲಿ ನಡೆಯಲಿರುವ ಹೋರಾಟದಲ್ಲಿ ಮುತವರ್ಜಿವಹಿಸಿ ಜವಾಬ್ದಾರಿ ನಿಭಾಯಿಸುವಂತೆ ಮನವಿ ಮಾಡಿಕೊಂಡರು. ಬಸನಗೌಡ ಪಾಟೀಲ ಯತ್ನಾಳ,,ಪ್ರತಾಪ ಸಿಂಹ,ಸಿಎಂ ಸಿದ್ದೇಶ್ ಅರವಿಂದ್ ಲಿಂಬಾವಳಿ,ಕುಮಾರ್ ಬಂಗಾರಪ್ಪ,ಬಿಪಿ ಹರೀಶ್ ,ಎನ್ ಆರ್ ಸಂತೋಷ ಸೇರಿದಂತೆ ರಾಜ್ಯದ ಪ್ರಮುಖ ಬಿಜೆಪಿ ನಾಯಕರು ಭಾಗವಹಿಸಲಿದ್ದಾರೆ ಎಂದು ಪೂರ್ವಭಾವಿ ಸಭೆಯಲ್ಲಿ ರಮೇಶ್ ಜಾರಕಿಹೊಳಿ ಮಾಹಿತಿ ನೀಡಿದರು.

ಡಿಸೆಂಬರ್ 1 ರಂದು ಬೆಳಗಾವಿಯ ಸರ್ದಾರ್ ಮೈದಾನದಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡಿ,ಪಕ್ಕದ ಗಾಂಧಿಭವನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಮಾವೇಶಗೊಳ್ಳಬೇಕು, ಬೆಳಗಾವಿ ಜಿಲ್ಲೆಯ ಎಲ್ಲ ತಾಲ್ಲೂಕುಗಳಿಂದ ಜನ ಸೇರುವಂತೆ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು.ಸಾವಿರಾರು ಸಂಖ್ಯೆಯಲ್ಲಿ ಸೇರುವ ಮೂಲಕ ಬೆಳಗಾವಿಯ ಹೋರಾಟ ಯಶಸ್ವಿಗೊಳಿಸಬೇಕು ಎಂದು ರಮೇಶ್ ಜಾರಕಿಹೊಳಿ ಪೂರ್ವಭಾವಿ ಸಭೆಯಲ್ಲಿ ಮನವಿ ಮಾಡಿಕೊಂಡರು


Spread the love

About Laxminews 24x7

Check Also

ತಂದೆಗೆ ಲಿವರ್ ದಾನ ಮಾಡಿ ಮಹಾದಾನಿ ಆದ ಮಗ

Spread the loveಬೆಳಗಾವಿ: ಲಿವರ್ ಸಂಪೂರ್ಣವಾಗಿ ನಿಷ್ಕ್ರೀಯವಾಗಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ರೋಗಿಗೆ ಯಶಸ್ವಿ ಲಿವರ್ ಕಸಿ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಿ ಜೀವವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ