Breaking News

ಬೆಳಗಾವಿ ಸಹ್ಯಾದ್ರಿ ನಗರದಲ್ಲಿರುವ ಶ್ರೀ ಮಹಾಬಳೇಶ್ವರ ದೇವಸ್ಥಾನದ ಕಾಂಕ್ರೀಟ್ ಕಾಮಗಾರಿ

Spread the love

: ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಹ್ಯಾದ್ರಿ ನಗರದಲ್ಲಿರುವ ಶ್ರೀ ಮಹಾಬಳೇಶ್ವರ ದೇವಸ್ಥಾನದ ಮೇಲ್ಚಾವಣಿಗೆ ಕಾಂಕ್ರೀಟ್ ಹಾಕುವ ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಗುರುವಾರ ಪೂಜೆ ನೆರವೇರಿಸಿ, ಚಾಲನೆ ನೀಡಿದರು.

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಕಾಳಜಿ ಹಾಗೂ ಅವರ ಅನುದಾನದಡಿ ದೇವಸ್ಥಾನ ಜೀರ್ಣೋದ್ಧಾರಗೊಳ್ಳಲಿದ್ದು, ಸ್ಥಳೀಯ ನಿವಾಸಿಗಳ ಸಲಹೆ ಸೂಚನೆ ಪಡೆದು, ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಚನ್ನರಾಜ ಹಟ್ಟಿಹೊಳಿ ಸೂಚಿಸಿದರು.

ಈ ವೇಳೆ ಸುರೇಶ ಜಾಡಗಿ, ಮಠಪತಿ, ಪ್ರಭಾಕರ ಮತ್ತಿಕಟ್ಟಿ, ವಿವೇಕ ಹಿರೇಮಠ, ಮನೋಹರ ಸದಲಗಿ, ಕೃಷ್ಣ ಕೊನೇರಿ ಸೇರಿದಂತೆ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಬಿಜೆಪಿ-ಜೆಡಿಎಸನಲ್ಲಿ ಅಸಮಾಧಾನಗೊಂಡ ಕಾರ್ಯಕರ್ತರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ ಏನಂದ್ರು??

Spread the loveಜ್ಯಾತ್ಯಾತೀತವಾಗಿ ಕಾಂಗ್ರೆಸ್ ಸಿದ್ಧಾಂತಗಳನ್ನು ಒಪ್ಪಿ ಬರುವ ಕಾರ್ಯಕರ್ತರಿಗೆ ಪಕ್ಷದಲ್ಲಿ ಸ್ವಾಗತವಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ