Breaking News

ಕರವೇ ತಾಲೂಕಾ ಘಟಕದ ಪದಾಧಿಕಾರಿಗಳ ಆಯ್ಕೆ

Spread the love

ಚಿಕ್ಕೋಡಿ:ಕರ್ನಾಟಕ ರಕ್ಷಣಾ ವೇದಿಕೆಯ ಚಿಕ್ಕೋಡಿ ತಾಲೂಕಾ ಘಟಕದ ಪದಾಧಿಕಾರಿಗಳ ಆಯ್ಕೆ ಹಾಗೂ ಕಾರ್ಯಕರ್ತರ ಸೇರ್ಪಡೆ ಕಾರ್ಯಕ್ರಮ ಜರುಗಿತು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಬೆಳಗಾವಿ ಜಿಲ್ಲಾ ಅಧ್ಯಕ್ಷರಾದ ದೀಪಕ ಗುಡಗನಟ್ಟಿ ಇವರ ನೇತೃತ್ವದಲ್ಲಿ ಸಭೆ ನಡೆಯಿತು. ಚಿಕ್ಕೋಡಿ ತಾಲೂಕಾ ಘಟಕಕ್ಕೆ ಯುವ ಘಟಕದ ತಾಲೂಕಾ ಅಧ್ಯಕ್ಷರಾಗಿ ಬಸವರಾಜ (ದಾದಾ) ಮಗದುಮ್ಮ ,ಸಂತೋಷ ಪೂಜಾರಿ ಇವರನ್ನು ತಾಲೂಕಾ ಉಪಾಧ್ಯಕ್ಷರಾಗಿ ಹಾಗೂ ಚಂದ್ರಕಾಂತ ಹುಕ್ಕೇರಿ ಇವರನ್ನು ತಾಲೂಕಾ ಗೌರವ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ನೂರಾರು ಕನ್ನಡ ಮನಸ್ಸುಗಳುಳ್ಳ ಕಾರ್ಯಕರ್ತರು ಕರವೇ ಸಂಘಟನೆಯನ್ನು ಸೇರಿದರು.

ಕಾರ್ಯಕರ್ತರನ್ನು ಉದ್ದೇಶಿಸಿ ದೀಪಕ ಗುಡಗನಟ್ಟಿ ಮಾತನಾಡಿ, ಯಾವಾಗಲೂ ಕನ್ನಡ ಭಾಷೆ ನೆಲ ಜಲ ಬಗ್ಗೆ ಹೋರಾಟ ನಡೆಸಬೇಕು, ಎಲ್ಲಿಯಾದರೂ ಅನ್ಯಾಯವಾದರೆ ನ್ಯಾಯಕ್ಕಾಗಿ ಹೋರಾಟ ಮಾಡಬೇಕು, ಸಂಘಟನೆಯ ಶಾಖೆಗಳನ್ನು ಪ್ರತಿಯೊಂದು ಹಳ್ಳಿಯಲ್ಲಿ ತೆರೆಯಬೇಕು, ಒಗ್ಗಟ್ಟಾಗಿ ನಾಡು ನುಡಿಗಾಗಿ ದುಡಿಯಬೇಕು ಎಂದು ಹೇಳಿದರು.

ಸುರೇಶ ಗವಣ್ಣವರ ಸಾಂಕೇತಿಕವಾಗಿ ಮಾತನಾಡಿದರು. ಸಂಜು ಬಡಿಗೇರ ಸ್ವಾಗತಿಸಿದರು, ರಾಜು ನಾಶೀಪುಡಿ ನಿರೂಪಿಸಿದರು, ಗಣೇಶ ರೋಖಡೆ ಇವರು ವಂದಿಸಿದರು.

ಈ ಕಾರ್ಯಕ್ರಮದಲ್ಲಿ ತಾಲೂಕಿನ ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಹಾಗೂ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಸಿಎಂ ಹುದ್ದೆಯ ರೇಸಿನಿಂದ ಹಿಂದೆ ಸರಿದವರು

Spread the love ಕಳೆದ ವಾರ ವಿದಾನಮಂಡಲ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಕುತೂಹಲಕಾರಿ ವಿಷಯವೊಂದು ಹೊರಬಿತ್ತು.ಅದರ ಪ್ರಕಾರ ಕರ್ನಾಟಕದಲ್ಲಿ ಮತ್ತೊಮ್ಮೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ