Breaking News

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 12ನೇ ವಾರ್ಷಿಕ ಘಟಿಕೋತ್ಸವ ಡಿ.3 ರಂದು

Spread the love

 ವಿಟಿಯು ಡಾ. ಎಪಿಜೆ ಅಬ್ದುಲ್ ಕಲಾಂ ಸಭಾಂಗಣದಲ್ಲಿ ನಡೆಯಲಿದೆ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಸಿ.ಎಂ.ತ್ಯಾಗರಾಜ್ ಹೇಳಿದರು.

ಸೋಮವಾರ ಬೆಳಗಾವಿ ಸಂಗೋಳಿ ರಾಯಣ್ಣ ಕಾಲೇಜಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ರಾಣಿ ಚನ್ನಮ್ಮ ವಿವಿಯ 12ನೇ ಘಟಿಕೋತ್ಸವದ ಅಧ್ಯಕ್ಷತೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಹಿಸಲಿದ್ದಾರೆ. ಘಟಿಕೋತ್ಸವದ ಭಾಷಣವನ್ನು ಮಾಜಿ ಹಿರಿಯ ಅಧಿಕಾರಿ, ಯು.ಎನ್.ಆಹಾರ ಮತ್ತು ಕೃಷಿ ಸಂಸ್ಥೆ ನಿಟ್ಟೆ ವಿವಿ ಮಂಗಳೂರಿನ ಡಾ. ಇಡ್ಯಾ ಕರುಣಾಸಾಗರ ಮಾಡಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ ಆಗಮಿಸಲಿದ್ದಾರೆ ಎಂದರು.

ವಿವಿಧ ಕ್ಷೇತ್ರದಲ್ಲಿ ಗಣನೀಯವಾಗಿ ಸೇವೆ ಸಲ್ಲಿಸಿದ ಮೂವರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ಪ್ರದಾನ ಮಾಡಲಾಗುವುದು. ಪ್ರದರ್ಶನಗಳ ಕಲೆ ಕ್ಷೇತ್ರದಲ್ಲಿ ಪದ್ಮಶ್ರೀ ಪಂಡಿತ್ ಎಸ್.ಬಾಲೇಶ್ ಭಜಂತ್ರಿ ಅವರಿಗೆ, ಉದ್ಯಮಶೀಲತೆ ಮತ್ತು ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಗೋಪಾಲ್ ಜಿನಗೌಡ, ನಾಗರಿಕ ಕ್ರೀಡೆ ಲೋಕೋಪಕಾರಿ ಸೇವಾ ಕ್ಷೇತ್ರದಲ್ಲಿ ಗೋಪಾಲ್ ಹೊಸುರ ಅವರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ಪ್ರದಾನ ಮಾಡಲಾಗುವುದು. ವಿವಿಧ ವಿಭಾಗದಲ್ಲಿ ಪದವಿ ಪಡೆದ ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಪದವಿ ಪ್ರಮಾಣ ನೀಡಲಾಗುವುದು ಎಂದರು.


Spread the love

About Laxminews 24x7

Check Also

ಫಿನಾಯಿಲ್ ಮಾರಾಟ ಮಾಡುತ್ತ ಚಿನ್ನದಂಗಡಿ ದೋಚಿದ್ದ ರಾಜಸ್ಥಾನಿ ಗ್ಯಾಂಗ್

Spread the loveಬೆಂಗಳೂರು : ಫಿನಾಯಿಲ್ ಸರಬರಾಜು ಮಾಡುತ್ತ ಚಿನ್ನದಂಗಡಿ ದೋಚಿದ್ದ ಐವರು ಆರೋಪಿಗಳನ್ನ ಕೆ. ಆರ್. ಪುರಂ ಠಾಣೆ ಪೊಲೀಸರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ