Breaking News

ಮುಡಾ ಹಗರಣರಾತ್ರೋರಾತ್ರಿ 48 ಸೈಟ್​ಗಳು ರದ್ದು

Spread the love

ಬೆಂಗಳೂರು: ಮುಡಾ ಹಗರಣದ ವಿಚಾರದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಮುಡಾ ಕ್ಲೀನ್​ಗೆ ಮೊದಲ ಹೆಜ್ಜೆ ಇಟ್ಟಿರುವ ಸಿಎಂ ಸಿದ್ದರಾಮಯ್ಯ ರಾತ್ರೋರಾತ್ರಿ 48 ಸೈಟ್​ಗಳನ್ನು ರದ್ದು ಮಾಡಿದ್ದಾರೆ.

ಹಿಂದಿನ‌ ಮುಡಾ ಆಯುಕ್ತ ದಿನೇಶ್ ಕುಮಾರ್ ಎಲ್ಲಾ ಕಾನೂನುಗಳನ್ನು ಗಾಳಿಗೆ ತೂರಿ 48 ಜನರಿಗೆ ಕೋಟ್ಯಾಂತರ ರೂ. ಬೆಲೆ ಬಾಳುವ ಸೈಟ್ ಗಳನ್ನು 5-6 ಲಕ್ಷಕ್ಕೆ ಹಂಚಿದ್ದರು. ಅದನ್ನು ಇದೀಗ ರದ್ದುಪಡಿಸಲಾಗಿದೆ.

ಅಸ್ತಿತ್ವವೇ ಇಲ್ಲದೆ ಸಹಕಾರ ಸಂಘದ ಹೆಸರಿನಲ್ಲಿ ಸೈಟ್​ಗಳನ್ನು ದಿನೇಶ್ ಕುಮಾರ್ ಹಂಚಿಕೆ ಮಾಡಿದ್ದರು. ಚಾಮುಂಡೇಶ್ವರಿ‌ ನಗರ ಸರ್ವೊದಯ ಸಂಘದ ಸದಸ್ಯರು ಎಂದು ಹಂಚಿಕೆ ಮಾಡಿದ್ದರು.

ಸೈಟ್ ಹಂಚಿಕೆಯಲ್ಲಿ ಬೇನಾಮಿ ಇದೆ ಎಂಬ ಆರೋಪ ಬಂದಿತ್ತು. ಇದು ಬಹುದೊಡ್ಡ ಅಕ್ರಮ ಎಂದು ಹಿಂದಿನ ಜಿಲ್ಲಾಧಿಕಾರಿ ರಾಜೇಂದ್ರ ವರದಿ ಕೊಟ್ಟಿದ್ದರು.

ಆ ವರದಿಯನ್ನು ಆಂತರಿಕವಾಗಿ ತನಿಖೆ ಮಾಡಿಸಿದ್ದ ರಾಜ್ಯ ಸರ್ಕಾರ ನಿನ್ನೆ ರಾತ್ರೋ ರಾತ್ರಿ ಎಲ್ಲಾ 48 ಸೈಟ್ ಗಳನ್ನು ರದ್ದು ಪಡಿಸಿದೆ. ಈ ಕುರಿತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಘುನಂದನ್ ಆದೇಶ ಹೊರಡಿಸಿದ್ದಾರೆ.

48 ಸೈಟ್​ಗಳ ಖಾತೆ ನೋಂದಣಿ ಖಾತೆ ವರ್ಗಾವಣೆ ಮಾಡದಂತೆ ನಗರ ಪಾಲಿಕೆ ಆಯುಕ್ತರಿಗೆ ಮತ್ತು ಜಿಲ್ಲಾ ನೋಂದಣಾಧಿಕಾರಿಗೆ ರಘುನಂದನ್ ಪತ್ರ ಬರೆದಿದ್ದಾರೆ. 48 ಸೈಟ್ ಗಳ ವಿವರದ ಜೊತೆ ಪತ್ರ ಬರೆದಿದ್ದಾರೆ.


Spread the love

About Laxminews 24x7

Check Also

ಮಿರಜ್‌ನಲ್ಲಿ 1 ಕೋಟಿ ರೂಪಾಯಿ ಮೌಲ್ಯದ ನಕಲಿ ನೋಟುಗಳ ಜಪ್ತಿ

Spread the love ಚಿಕ್ಕೋಡಿ:ಮಹಾರಾಷ್ಟ್ರ- ಕರ್ನಾಟಕ ಗಡಿ ಭಾಗದಲ್ಲಿ ಇತ್ತಿಚಿಗೆ ವಿಶೇಷ ಕಾರ್ಯಾಚರಣೆ ನಡೆಸಿದ ಮಹಾರಾಷ್ಟ್ರ ಪೊಲೀಸರು, ಬರೋಬ್ಬರಿ 1 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ