ದಾಸನಿಗೆ ತಾತ್ಕಾಲಿಕ ರಿಲೀಫ್
Laxminews 24x7
ಡಿಸೆಂಬರ್ 9, 2024
ರಾಜಕೀಯ, ರಾಜ್ಯ, ಸಿನೆಮಾ
157 Views
ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದಲ್ಲಿ 2ನೇ ಆರೋಪಿ ಆಗಿರುವ ನಟ ದರ್ಶನ್ ಅವರ ಮಧ್ಯಂತರ ಜಾಮೀನು ಅವಧಿ ವಿಸ್ತರಣೆ ಆಗಿದೆ. ಇದರಿಂದಾಗಿ ಆರೋಪಿ ದರ್ಶನ್ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ. ಮುಂದಿನ ದಿನಾಂಕದವರೆಗೂ ಮಧ್ಯಂತರ ಜಾಮೀನು ವಿಸ್ತರಣೆ ಮಾಡಿ ಹೈಕೋರ್ಟ್ ಆದೇಶ ನೀಡಿದೆ.
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಕೇಸ್ನಲ್ಲಿ ಎ2 ಆಗಿರುವ ನಟ ದರ್ಶನ್ ಅವರಿಗೆ ಈಗ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಅವರ ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಸದ್ಯ ಅವರು ಬೆನ್ನು ನೋವಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಂದಿನ ದಿನಾಂಕದವರೆಗೂ ಮಧ್ಯಂತರ ಜಾಮೀನು ವಿಸ್ತರಣೆ ಮಾಡಿ ಹೈಕೋರ್ಟ್ ಆದೇಶ ನೀಡಿದೆ. ಇಂದು (ಡಿಸೆಂಬರ್ 9) ಹೈಕೋರ್ಟ್ನಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆದಿದೆ. ಎಸ್ಪಿಪಿ ಪ್ರಸನ್ನ ಕುಮಾರ್ ವಾದ ಮಾಡಿದ್ದಾರೆ.