Breaking News
Home / ರಾಜ್ಯ / ಕರ್ನಾಟಕ ಬಂದ್ ಗೆ ಕರೆ ಬಸ್ ಗಳ ಸೇವೆ ಎಂದಿನಂತೆ ಇರಲಿದೆ.

ಕರ್ನಾಟಕ ಬಂದ್ ಗೆ ಕರೆ ಬಸ್ ಗಳ ಸೇವೆ ಎಂದಿನಂತೆ ಇರಲಿದೆ.

Spread the love

ಬೆಂಗಳೂರು : ಮರಾಠ ಅಭಿವೃದ್ಧಿ ನಿಮಗ ಸ್ಥಾಪನೆ ವಿರೋಧಿಸಿ ಕೆಲ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಆದರೆ  ಕೆಎಸ್ ಆರ್ ಟಿಸಿ , ಬಿಎಂಟಿಸಿ ಬಸ್ ಗಳ ಸೇವೆ ಎಂದಿನಂತೆ ಇರಲಿದೆ.

ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್  ಹಿನ್ನಲೆ ಬಸ್ ಸಂಚಾರ ಬಂದ್ ಆಗಲಿದೆ ಎಂಬ ಅನುಮಾನ ಜನರಲ್ಲಿದೆ. ಆದರೆ ಬಿಎಂಟಿಸಿ, ಕೆಎಸ್ ಆರ್ ಟಿಸಿ ಬಸ್ ಸಂಚಾರ ಎಂದಿನಂತೆ ಇರಲಿದೆ. 5 ಸಾವಿರ ಬಸ್ ಗಳು ರಸ್ತೆಗೆ ಇಳಿಸಲು ಬಿಎಂಟಿಸಿ ಸಿದ್ದತೆ ಮಾಡಿಕೊಳ್ಳುತ್ತಿದೆ.

ನಾಳೆ ಶನಿವಾರ ಹಾಗೂ ಬಂದ್​ನ ಹಿನ್ನೆಲೆ  ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಮುಖವಾಗುವ ಸಾಧ್ಯತೆಯೂ ಇರಲಿದೆ ಎನ್ನಲಾಗಿದೆ.  ಈ ಹಿನ್ನೆಲೆ  ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ಬಸ್ಸುಗಳನ್ನ ರಸ್ತೆಗೆ ಇಳಿಸಲಾಗುತ್ತದೆ ಎನ್ನಲಾಗಿದೆ.

ನಾಳೆ ನಮ್ಮ ಎಲ್ಲಾ ಬಸ್ ನಿಲ್ದಾಣ, ಡಿಪೋದಲ್ಲಿ ಪೊಲೀಸ್ ಭದ್ರತೆಗೆ ಆಯಾ ಜಿಲ್ಲಾ ಎಸ್ಪಿಗಳಿಗೆ ಮನವಿ ಮಾಡಿಕೊಳ್ಳಲಾಗಿದೆ ಎಂದು ಎಸ್​ಆರ್​ಟಿಸಿ ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ.


Spread the love

About Laxminews 24x7

Check Also

ಪಾನಿಪುರಿ ಮಾರುವ ಜ್ಯೂನೀಯರ್ ಮೋದಿ; ಮೋದಿ ತರಾನೇ..ಆದ್ರೆ ಅಲ್ಲ!

Spread the loveನವದೆಹಲಿ: ಗುಜರಾತ್‌ನ ಪಾನಿ ಪುರಿ ಮಾರಾಟಗಾರ ಅನಿಲ್ ಭಾಯಿ ಠಕ್ಕರ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಹೋಲುವ ಹಾಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ