Breaking News

ಕೊನೆಗೂ ಮಾಜಿ ಸಿಎಂ ನಿಜಲಿಂಗಪ್ಪ ಮನೆ ಖರೀದಿಸಿದ ಕರ್ನಾಟಕ ಸರ್ಕಾರ

Spread the love

ಡಿಸೆಂಬರ್ 13: ಎಐಸಿಸಿ ಮಾಜಿ ಅಧ್ಯಕ್ಷ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ ನಿಜಲಿಂಗಪ್ಪ ಅವರ ಚಿತ್ರದುರ್ಗದ ನಿವಾಸವನ್ನು ಕೊನೆಗೂ ಕರ್ನಾಟಕ ಸರ್ಕಾರ ಖರೀದಿ ಮಾಡಿದೆ. ಮಾರುಕಟ್ಟೆ ಮೌಲ್ಯಕ್ಕಿಂತಲೂ ಸುಮಾರು 1 ಕೋಟಿ ರೂ. ಕಡಿಮೆ ಮೊತ್ತಕ್ಕೆ ಸರ್ಕಾರ, ನಿಜಲಿಂಗಪ್ಪ ನಿವಾಸವನ್ನು ಖರೀದಿ ಮಾಡಿದ ಬಗ್ಗೆ ವರದಿಯಾಗಿದೆ. ನಿಜಲಿಂಗಪ್ಪ ಅವರು ಬದುಕಿ, ಬಾಳಿರುವ ಚಿತ್ರದುರ್ಗದ ಮನೆಯ ಖರೀದಿಗೆ ಸರ್ಕಾರ ಉತ್ಸಾಹ ತೋರದ್ದರಿಂದ ಇತ್ತೀಚೆಗೆ ಕೆಲವು ದಿನಗಳ ಹಿಂದೆ ಅವರ ಮಗ ಎಸ್​ಎನ್​ ಕಿರಣಶಂಕರ್ ‘‘ಮನೆ ಮಾರಾಟಕ್ಕಿದೆ’’ ಎಂದು ಜಾಹೀರಾತು ನೀಡಿದ್ದರು. ಇದರಿಂದ ಐತಿಹಾಸಿಕ ನಿವಾಸ ಖಾಸಗಿಯವರ ಪಾಲಾಗುವ ಆತಂಕ ಎದುರಾಗಿತ್ತು.

ಇದೀಗ ಅಂತಿಮವಾಗಿ, ನಾಲ್ಕು ವರ್ಷಗಳ ವಿಳಂಬದ ಬಳಿಕ ಕರ್ನಾಟಕ ಸರ್ಕಾರ ಮನೆ ಖರೀದಿಸಿದೆ. ಎಸ್​ಎನ್​ ಕಿರಣಶಂಕರ್ ಅವರು ಸ್ಥಳೀಯ ತಹಶೀಲ್ದಾರ್ ಮೂಲಕ ಮನೆಯನ್ನು ಸರ್ಕಾರಕ್ಕೆ ಹಸ್ತಾಂತರಿಸಿದರು ಎಂದು ‘ದಿ ನ್ಯೂ ಇಂಡಿಯನ್ ಎಕ್ಸ್​​ಪ್ರೆಸ್’ ವರದಿ ಮಾಡಿದೆ. ಕಿರಣಶಂಕರ್ ಅವರು ಕರ್ನಾಟಕ ಸರ್ಕಾರದ ಮುಖ್ಯ ವಾಸ್ತುಶಿಲ್ಪಿಯಾಗಿ ಸೇವೆ ಸಲ್ಲಿಸಿದ್ದರು.

ಮಹಾತ್ಮಾ ಗಾಂಧಿಯ ಭಾಗವಹಿಸಿದ್ದ 1924 ರ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಸಂದರ್ಭದಲ್ಲೇ ಬೆಳಗಾವಿಯಲ್ಲಿನ ಐತಿಹಾಸಿಕ ನಿವಾಸ ಸರ್ಕಾರದ ಅಧೀನಕ್ಕೆ ಬಂದಿರುವುದು ವಿಶೇಷ.


Spread the love

About Laxminews 24x7

Check Also

ಹಸಿದ ಹೊಟ್ಟೆಗೆ ಆಸರೆ: ಮುನವಳ್ಳಿಯಲ್ಲಿ ಇಂದಿರಾ ಕ್ಯಾಂಟಿನ್ ಲೋಕಾರ್ಪಣೆ!

Spread the love​”ಬಡವರ ಮತ್ತು ಶ್ರಮಿಕ ವರ್ಗದ ಜನರ ಹಸಿವು ನೀಗಿಸುವ ಉದ್ದೇಶದಿಂದ, ಇಂದು ಮುನವಳ್ಳಿ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ