ಚಿಕ್ಕೋಡಿ: ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಮಹಿಳೆ ನೇಣಿಗೆ ಶರಣಾಗಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ರಾಯಬಾಗ (Raibag) ತಾಲೂಕಿನ ನಿಡಗುಂದಿ (Nidagundi) ಗ್ರಾಮದಲ್ಲಿ ನಡೆದಿದೆ.
ರಮ್ಯಾಶ್ರೀ ಬಸವರಾಜ ಹಂಪನ್ನವರ (25) ಮೃತ ಮಹಿಳೆ. ಅನಾರೋಗ್ಯದ ಸಮಸ್ಯೆಯಿಂದ ಮಹಿಳೆ ನೇಣಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ರಮ್ಯಾಶ್ರೀ ಕಳೆದ ನಾಲ್ಕು ವರ್ಷದ ಹಿಂದೆ ಬೇರೆ ಮದುವೆ ಆಗಿ ಪತಿಯಿಂದ ಬೇರ್ಪಟ್ಟಿದ್ದಳು.
ಬಳಿಕ ಮೂರು ತಿಂಗಳ ಹಿಂದೆ ನಿಡಗುಂದಿ ಗ್ರಾಮದ ಬಸವರಾಜ ಹಂಪನ್ನವರ ಎಂಬವರನ್ನು ಮದುವೆ ಆಗಿದ್ದಳು. ಮೊದಲನೆ ಮದುವೆಯಾಗಿ ನಾಲ್ಕು ವರ್ಷ ಸಂಸಾರ ನಡೆಸಿದ್ದಳು. ಬಳಿಕ ಮತ್ತೊಂದು ಮದುವೆ ಆಗಿ ಕೇವಲ ಮೂರೇ ತಿಂಗಳಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನೇಣು ಬಿಗಿದ ಸ್ಥಿತಿಯಲ್ಲಿ ರಮ್ಯಾಶ್ರೀ ಶವ ಪತ್ತೆಯಾಗಿದೆ
Laxmi News 24×7