ಡಿಸೆಂಬರ್ 16: ಮೂರು ತಿಂಗಳಿಂದ ವೇತನ ನೀಡದಿದ್ದಕ್ಕೆ ಬ್ಯಾನರ್ ಕಂಬ ಏರಿ ಕಾರ್ಮಿಕ (labor) ಪ್ರತಿಭಟನೆ ಮಾಡಿರುವಂತಹ ಘಟನೆ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ನಡೆದಿದೆ.
ಮಂಜುನಾಥ ಬಸಪ್ಪ ಮಡೊಳ್ಳಿ (48) ಪ್ರತಿಭಟನೆ ಮಾಡಿದ ಕಾರ್ಮಿಕ. ಸಂಗಮ್ ಹೋಟೆಲ್ನಲ್ಲಿ ಮಂಜುನಾಥ ಕೆಲಸ ಮಾಡುತ್ತಿದ್ದರು. ಸಂಬಳ ಕೇಳಿದ್ದಕ್ಕೆ ಕಾರ್ಮಿಕನ ಮೇಲೆ ಮಾಲೀಕ ಚಂದ್ರಶೇಖರ್ ಶೆಟ್ಟಿ ಹಲ್ಲೆ ಮಾಡಿ ಅವಾಚ್ಯವಾಗಿ ನಿಂದಿಸಿದ್ದಾರೆ. ಇದರಿಂದ ಮನನೊಂದು ಹೋಟೆಲ್ ಎದುರಿನ ಬ್ಯಾನರ್ ಕಂಬ ಏರಿ ಕುಳಿತಿದ್ದಾರೆ.
ಕೂಡಲೇ ಕಂಬ ಏರಿದ ಆಟೋ ಚಾಲಕ ಕಾರ್ಮಿಕನನ್ನ ಕಾಪಾಡಿ ಪೊಲೀಸರ ಕೈಗೆ ಒಪ್ಪಿಸಿದ್ದಾರೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Laxmi News 24×7