ಬೆಂಗಳೂರು: ರಾಜ್ಯದಲ್ಲಿ ಕೊರೋನ ಮಹಾಮಾರಿ 2ನೇ ಅಲೆ ಪ್ರಾರಂಭವಾಗುವ ಲಕ್ಷಣಗಳು ಕಂಡುಬರುತ್ತಿದ್ದು, ರಾಜ್ಯದಲ್ಲಿ ಕೊರೋನಗೆ ಸಂಬಂಧಿಸಿದಂತೆ ಕಠಿಣ ಕ್ರಮ ಜಾರಿಗೊಳಿಸಲು ರಾಜ್ಯ ಸರಕಾರ ಮುಂದಾಗಿದೆ. ಡಿಸೆಂಬರ್ 20ರಿಂದ ಜನವರಿ 2ರವರೆಗೆ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಇಂದು ನಗರದಲ್ಲಿ ತಾಂತ್ರಿಕ ಸಲಹಾ ಸಮಿತಿಯ ಸಭೆಯನ್ನು ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನಾ 2ನೇ ಅಲೆಯನ್ನು ತಪ್ಪಿಸಲು ರಾಜ್ಯದಲ್ಲಿ ಕಠಿಣ ಕ್ರಮವನ್ನು ಜರಗಿಸುವುದು ಅನಿವಾರ್ಯವಾಗಿದೆ. ಇದಕ್ಕೆ ಸಂಬಂಧಿಸಿದಂತೆ ಈ ಹಿಂದೆ ರಾಜ್ಯದಲ್ಲಿ ಕೊರೋನಾ 2ನೇ ಅಲೇ ಜನವರಿಯಿಂದ ಆರಂಭಗೊಳ್ಳಲಿದೆ ಎಂಬುದಾಗಿ ಆರೋಗ್ಯ ಇಲಾಖೆಯ ತಾಂತ್ರಿಕ ಸಲಹಾ ಸಮಿತಿ ವರದಿ ನೀಡಿತ್ತು.
ಅಂತ್ಯಕ್ರಿಯೆಯಲ್ಲಿ 50 ಜನ ಮಾತ್ರ ಸೇರಬೇಕು. ರಾಜಕೀಯ ಕಾರ್ಯಕ್ರಮಕ್ಕೆ 200 ಜನರಿಗೆ ಮಿತಿ ಮಾಡಲಾಗಿದೆ. ಜನರು ಕೊರೋನಾ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು. ಮದುವೆ, ಸಮಾರಂಭಕ್ಕೆ 100 ಜನ ಮೀರದಂತೆ ಕ್ರಮ ಕೈಗೊಳ್ಳಲಾಗುತ್ತದೆ. ಕೊರೋನಾ 2ನೇ ಅಲೆ ಆರಂಭವಾಗುವಂತ ಡಿಸೆಂಬರ್ 20ರಿಂದ ಜನವರಿ 2ರ 45 ದಿನ ಬಹಳ ನಿರ್ಣಾಯಕ ದಿನಗಳು ಎಂದು ಹೇಳಿದರು.
ನಿರ್ಣಾಯಕ ದಿನಗಳ ಅವಧಿಯಲ್ಲಿ ಕೊರೋನಾ ಟೆಸ್ಟ್ ಸಂಖ್ಯೆ ಹೆಚ್ಚಳ ಮಾಡಲಾಗುತ್ತದೆ. ರೋಗದ ಲಕ್ಷಣ ಇದ್ದವರು ಟೆಸ್ಟ್ ಮಾಡಿಸಿಕೊಳ್ಳಬೇಕು. ನ್ಯೂಯರ್ ಮಾಡದಂತೆ ಸಲಹಾ ಸಮಿತಿ ಸಲಹೆ ಮಾಡಿದೆ. ಈ ಬಗ್ಗೆ ಸಿಎಂ ಜೊತೆಗೆ ಚರ್ಚಿಸಿ ನಿರ್ಧಾರ ಮಾಡಲಾಗುತ್ತದೆ ಎಂದು ಹೇಳಿದ