Breaking News

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜಾಮೀನು ಪಡೆದಿದ್ದ ಏಳು ಆರೋಪಿಗಳ ಪೈಕಿ ಇಬ್ಬರಿಗೆ ಶ್ಯೂರಿಟಿ ಸಿಕ್ಕಿಲ್ಲ.

Spread the love

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಪಾಲಾಗಿ ಜಾಮೀನು ಪಡೆದಿದ್ದ ಏಳು ಮಂದಿ ಆರೋಪಿಗಳ ಪೈಕಿ ಇಬ್ಬರಿಗೆ ಶ್ಯೂರಿಟಿ ಸಿಗದ ಪರಿಣಾಮ ಕಾರಾಗೃಹದಲ್ಲೇ ಇರಬೇಕಾದ ಅನಿವಾರ್ಯತೆ ಎದುರಾಗಿದೆ.

ಆರೋಪಿಗಳಾದ ಪವಿತ್ರಾ ಗೌಡ, ದರ್ಶನ್, ನಾಗರಾಜ್, ಪ್ರದೂಷ್, ಲಕ್ಷ್ಮಣ್ ಬಿಡುಗಡೆಯಾಗಿದ್ದು, ಇನ್ನಿಬ್ಬರಾದ ಜಗದೀಶ್ ಹಾಗೂ ಅನುಕುಮಾರ್​ಗೆ ಯಾರೂ ಶ್ಯೂರಿಟಿ ನೀಡಲು ಮುಂದಾಗದೆ ಸೆರೆಮನೆಯಲ್ಲಿದ್ದಾರೆ. ಇದೇ ಪ್ರಕರಣದಲ್ಲಿ ಪೊಲೀಸರೆದುರು ಶರಣಾಗಿದ್ದ ಆರೋಪಿಗಳಾದ ಕಾರ್ತಿಕ್, ಕೇಶವಮೂರ್ತಿ ಹಾಗೂ ನಿಖಿಲ್‌ಗೆ ಶ್ಯೂರಿಟಿ ನೀಡಿದ್ದರಿಂದ ಸುಮಾರು 10 ದಿನಗಳ ಕಾಲ ಜೈಲಿನಲ್ಲಿ ಉಳಿದಿದ್ದರು.

6ನೇ ಆರೋಪಿಯಾಗಿರುವ ಜಗದೀಶ್ ಚಿತ್ರದುರ್ಗ ಮೂಲದವರು. ಇವರ ತಾಯಿ ಸುಲೋಚನಾ ಪ್ರತಿಕ್ರಿಯಿಸಿ, “ಜಾಮೀನು ಸಿಕ್ಕರೂ ಶ್ಯೂರಿಟಿ ನೀಡದಿದ್ದರಿಂದ ಇಂದು ಜೈಲಿನಿಂದ ಬಿಡುಗಡೆಯಾಗಿಲ್ಲ. ಸಂಬಂಧಿಯೊಬ್ಬರು ಪಹಣಿ ಪತ್ರ ತೆಗೆದುಕೊಂಡು ನ್ಯಾಯಾಲಯಕ್ಕೆ ಹೋದರೂ ಮೂವರ ಶ್ಯೂರಿಟಿ ಅಗತ್ಯವಾಗಿದ್ದರಿಂದ ವಾಪಸ್ ಬರಬೇಕಾಯಿತು. ಜೈಲಿನಿಂದ ಮಗ ಹೊರಬರಲು ದರ್ಶನ್ ವ್ಯವಸ್ಥೆ ಮಾಡಬೇಕು. ನಮ್ಮ ಬಳಿ ಬೆಂಗಳೂರಿಗೆ ಹೋಗಿಬರಲು ಹಣವಿಲ್ಲ” ಎಂದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ