Breaking News

ಬಿಜೆಪಿ ಸಂಸದರು ತಳ್ಳಿದ್ದರಿಂದ ಮೊಣಕಾಲುಗಳಿಗೆ ಗಾಯವಾಗಿದೆ: ಖರ್ಗೆ

Spread the love

ಸಂಸತ್ತಿನ ಹೊರಗೆ ಕಾಂಗ್ರೆಸ್​ ಪ್ರತಿಭಟನೆ ವೇಳೆ ತನ್ನನ್ನು ಬಿಜೆಪಿ ಸಂಸದರು ತಳ್ಳಿ ಬೀಳಿಸಿದ್ದಾರೆ ಎಂದು ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಬಿಜೆಪಿ ಸಂಸದರು ನನ್ನನ್ನು ತಳ್ಳಿ ಗಾಯಗೊಳಿಸಿದ್ದಾರೆ, ಸಂಸದರೊಂದಿಗೆ ಸಂಸತ್​ನ ಮಕರ ದ್ವಾರವನ್ನು ತಲುಪಿದಾಗ ನನ್ನನ್ನು ಬಿಜೆಪಿ ಸಂಸದರು ತಳ್ಳಿದ್ದಾರೆ ನಾನು ಸಮತೋಲನ ಕಳೆದುಕೊಂಡು ಕೆಳಗೆ ಬಿದ್ದಿದ್ದೆ.

ಈಗಾಗಲೇ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಮೊಣಕಾಲುಗಳಿಗೆ ಗಾಯವಾಗಿದೆ , ಕಾಂಗ್ರೆಸ್ ಸಂಸದರು ಕುರ್ಚಿ ತಂದು ನನ್ನನ್ನು ಕೂರಿಸಿದರು. ಬಹಳ ಕಷ್ಟದಿಂದ ಮತ್ತು ನನ್ನ ಸಹೋದ್ಯೋಗಿಗಳ ಬೆಂಬಲದಿಂದ 11 ಗಂಟೆಗೆ ಸದನಕ್ಕೆ ಕುಂಟುತ್ತಾ ಬಂದೆ ಎಂದು ಆರೋಪ ಮಾಡಿ ಸ್ಪೀಕರ್​ಗೆ ಖರ್ಗೆ ಪತ್ರ ಬರೆದಿದ್ದಾರೆ.

ಇಂದು ಬೆಳಗ್ಗೆಯಷ್ಟೇ ಬಿಜೆಪಿ ಸಂಸದ ಪ್ರತಾಪ್ ಸಾರಂಗಿ ತಲೆಗೆ ಗಾಯವಾಗಿದ್ದು, ರಾಹುಲ್ ಗಾಂಧಿಯೇ ತನ್ನನ್ನು ತಳ್ಳಿ ಬೀಳಿಸಿದ್ದರು ಎಂದು ಆರೋಪಿಸಿದ್ದರು. ಈ ಆರೋಪದ ಬೆನ್ನಲ್ಲೇ ಮಲ್ಲಿಕಾರ್ಜುನ ಖರ್ಗೆಯವರ ಆರೋಪವೂ ಕೇಳಿಬಂದಿದೆ.


Spread the love

About Laxminews 24x7

Check Also

ಬಂಡೀಪುರ ಸಫಾರಿ ಪುನಾರಂಭಕ್ಕೆ ರೈತ ಸಂಘದ ವಿರೋಧ: ಗುಂಡ್ಲುಪೇಟೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

Spread the love​ಗುಂಡ್ಲುಪೇಟೆ: ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿ ಪುನಾರಂಭಿಸಲು ಉದ್ದೇಶಿಸಿರುವ ಸರ್ಕಾರದ ನಿರ್ಧಾರದ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ