Breaking News

ಬಿಜೆಪಿ ಸಂಸದರು ತಳ್ಳಿದ್ದರಿಂದ ಮೊಣಕಾಲುಗಳಿಗೆ ಗಾಯವಾಗಿದೆ: ಖರ್ಗೆ

Spread the love

ಸಂಸತ್ತಿನ ಹೊರಗೆ ಕಾಂಗ್ರೆಸ್​ ಪ್ರತಿಭಟನೆ ವೇಳೆ ತನ್ನನ್ನು ಬಿಜೆಪಿ ಸಂಸದರು ತಳ್ಳಿ ಬೀಳಿಸಿದ್ದಾರೆ ಎಂದು ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಬಿಜೆಪಿ ಸಂಸದರು ನನ್ನನ್ನು ತಳ್ಳಿ ಗಾಯಗೊಳಿಸಿದ್ದಾರೆ, ಸಂಸದರೊಂದಿಗೆ ಸಂಸತ್​ನ ಮಕರ ದ್ವಾರವನ್ನು ತಲುಪಿದಾಗ ನನ್ನನ್ನು ಬಿಜೆಪಿ ಸಂಸದರು ತಳ್ಳಿದ್ದಾರೆ ನಾನು ಸಮತೋಲನ ಕಳೆದುಕೊಂಡು ಕೆಳಗೆ ಬಿದ್ದಿದ್ದೆ.

ಈಗಾಗಲೇ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಮೊಣಕಾಲುಗಳಿಗೆ ಗಾಯವಾಗಿದೆ , ಕಾಂಗ್ರೆಸ್ ಸಂಸದರು ಕುರ್ಚಿ ತಂದು ನನ್ನನ್ನು ಕೂರಿಸಿದರು. ಬಹಳ ಕಷ್ಟದಿಂದ ಮತ್ತು ನನ್ನ ಸಹೋದ್ಯೋಗಿಗಳ ಬೆಂಬಲದಿಂದ 11 ಗಂಟೆಗೆ ಸದನಕ್ಕೆ ಕುಂಟುತ್ತಾ ಬಂದೆ ಎಂದು ಆರೋಪ ಮಾಡಿ ಸ್ಪೀಕರ್​ಗೆ ಖರ್ಗೆ ಪತ್ರ ಬರೆದಿದ್ದಾರೆ.

ಇಂದು ಬೆಳಗ್ಗೆಯಷ್ಟೇ ಬಿಜೆಪಿ ಸಂಸದ ಪ್ರತಾಪ್ ಸಾರಂಗಿ ತಲೆಗೆ ಗಾಯವಾಗಿದ್ದು, ರಾಹುಲ್ ಗಾಂಧಿಯೇ ತನ್ನನ್ನು ತಳ್ಳಿ ಬೀಳಿಸಿದ್ದರು ಎಂದು ಆರೋಪಿಸಿದ್ದರು. ಈ ಆರೋಪದ ಬೆನ್ನಲ್ಲೇ ಮಲ್ಲಿಕಾರ್ಜುನ ಖರ್ಗೆಯವರ ಆರೋಪವೂ ಕೇಳಿಬಂದಿದೆ.


Spread the love

About Laxminews 24x7

Check Also

ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು!

Spread the love ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು! ಯಮಕನಮರಡಿ ವಿಧಾನಸಭಾ ಕ್ಷೇತ್ರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ