Breaking News

ಲೈವ್ ಬಂದು ಅಸಲಿ ವಿಚಾರ ಹೇಳಿದ ಗೋಲ್ಡ್ ಸುರೇಶ್

Spread the love

ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಗೋಲ್ಡ್ ಸುರೇಶ್ ಅವರು ಎಕ್ಸಿಟ್ ಆಗಿದ್ದಾರೆ. ಇದಕ್ಕೆ ಕಾರಣ ಏನು ಎಂಬ ಬಗ್ಗೆ ಚರ್ಚೆ ನಡೆಯಿತು.

ಆರಂಭದಲ್ಲಿ ಅವರ ತಂದೆ ನಿಧನ ಹೊಂದಿದ್ದಾರೆ ಎನ್ನಲಾಗಿತ್ತು. ಆ ಬಳಿಕ ಅದು ಸುಳ್ಳು ಎನ್ನುವ ವಿಚಾರ ತಿಳಿಯಿತು. ಆ ಬಳಿಕ ಬಂದಿದ್ದೇ ಸಾಲಬಾಧೆ ವಿಚಾರ. ಅವರು ಸಾಲ ಮಾಡಿಕೊಂಡಿದ್ದಕ್ಕೆ ಹೊರ ಬಂದರು ಎಂದು ಹೇಳಲಾಯಿತು.

ಈಗ ಕಲರ್ಸ್ ಕನ್ನಡ ಇನ್​ಸ್ಟಾಗ್ರಾಮ್​ನಲ್ಲಿ ಲೈವ್​​ನಲ್ಲಿ ಬಂದ ಸುರೇಶ್ ಈ ವಿಚಾರದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.ಬಿಗ್ ಬಾಸ್​ನಿಂದ ಆಫರ್ ಬಂದಾಗ ಶಾಕ್ ಹಾಗೂ ಖುಷಿ ಎರಡೂ ಆಯಿತು. ಅವರು ಯಾಕೆ ನನಗೆ ಆಫರ್ ಕೊಟ್ಟರು ಗೊತ್ತಿಲ್ಲ.

ಆದರೆ, ಈ  ಜರ್ನಿ ರೋಚಕ ಆಗಿತ್ತು. ಎಲ್ಲೋ ಇದ್ದವನನ್ನು ಗುರುತಿಸಿ, ಕರೆದಿದ್ದಾರೆ. ಬಿಗ್ ಬಾಸ್ ಮನೆ ಒಳಗೆ ಹೋಗಿ ಸುಮಾರು ದಿನ ಆಡಿ ಬಂದಿದ್ದೇನೆ’ ಎಂದು ಖುಷಿ ಹೊರಹಾಕಿದರು ಗೋಲ್ಡ್ ಸುರೇಶ್.


Spread the love

About Laxminews 24x7

Check Also

ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು!

Spread the love ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು! ಯಮಕನಮರಡಿ ವಿಧಾನಸಭಾ ಕ್ಷೇತ್ರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ