Breaking News

ಅಂಬೇಡ್ಕರ್​ ಕುರಿತು ಶಾ ಹೇಳಿಕೆ; ಸಂಸತ್​ ಭವನದಲ್ಲಿ ಕಾಂಗ್ರೆಸ್​ – ಬಿಜೆಪಿ ಪರಸ್ಪರ ಪ್ರತಿಭಟನೆ

Spread the love

ನವದೆಹಲಿ: ಅಂಬೇಡ್ಕರ್​ ಕುರಿತಾಗಿ ಕೇಂದ್ರ ಗೃಹ ಸಚಿವ ಅಮಿತ್​ ಶಾ ಅಂಬೇಡ್ಕರ್​ ಹೇಳಿಕೆ ವಿರೋಧಿಸಿ, ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಇಂಡಿಯಾ ಒಕ್ಕೂಟದ ಸದಸ್ಯರು, ನೀಲಿ ಬಟ್ಟೆ ಧರಿಸಿ ಸಂಸತ್​ ಭವನದ ಆವರಣದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಕಾಂಗ್ರೆಸ್ ನಾಯಕರು ಸಂಸತ್ತಿನ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆಯಿಂದ ಸಂಸತ್ ಭವನದವರೆಗೆ ಅಂಬೇಡ್ಕರ್​ ಭಾವಚಿತ್ರ ಹಿಡಿದು ‘ಜೈ ಭೀಮ್’ ಘೋಷಣೆ ಕೂಗುತ್ತಾ ಮೆರವಣಿಗೆ ಕೈಗೊಂಡರು.

ಕೇಂದ್ರ ಗೃಹ ಸಚಿವರು ಕ್ಷಮೆ ಕೇಳಿ, ರಾಜೀನಾಮೆ ನೀಡಬೇಕು ಎಂದು ಇಂಡಿಯಾ ಒಕ್ಕೂಟದ ಸಂಸದ ಮಕರ್​ ದ್ವಾರ್​​ ಒತ್ತಾಯಿಸಿದರು. ಶಿವಸೇನಾ (ಯುಬಿಟಿ) ನಾಯಕ ಸಂಜಯ್​ ರಾವತ್​ ಮಾತನಾಡಿ, ಅವರು ಬಾಯಿ ತಪ್ಪಿ ಅಂಬೇಡ್ಕರ್​ ಕುರಿತು ಮಾತನಾಡಿದರೆ, ಅಮಿತ್​ ಶಾ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.


Spread the love

About Laxminews 24x7

Check Also

ಮಿರಜ್‌ನಲ್ಲಿ 1 ಕೋಟಿ ರೂಪಾಯಿ ಮೌಲ್ಯದ ನಕಲಿ ನೋಟುಗಳ ಜಪ್ತಿ

Spread the love ಚಿಕ್ಕೋಡಿ:ಮಹಾರಾಷ್ಟ್ರ- ಕರ್ನಾಟಕ ಗಡಿ ಭಾಗದಲ್ಲಿ ಇತ್ತಿಚಿಗೆ ವಿಶೇಷ ಕಾರ್ಯಾಚರಣೆ ನಡೆಸಿದ ಮಹಾರಾಷ್ಟ್ರ ಪೊಲೀಸರು, ಬರೋಬ್ಬರಿ 1 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ