Breaking News

ನನ್ನ ಜೀವಕ್ಕೆ ಅಪಾಯವಿದೆ, ಕೊಲೆಗೂ ಸಂಚು ನಡೆಸಲಾಗುತ್ತಿದೆ” ಎಂದು ವಿಧಾನಪರಿಷತ್​ ಸದಸ್ಯ ಸಿ.ಟಿ.ರವಿ

Spread the love

ಬೆಳಗಾವಿ: ”ನಾನು ಕೊಟ್ಟ ದೂರನ್ನು ಸ್ವೀಕಾರ ಮಾಡದೇ, ನನ್ನನ್ನು ಬೇರೆ ಕಡೆ ಕರೆದೊಯ್ಯಲು ಯತ್ನಿಸಲಾಗುತ್ತಿದೆ. ನನ್ನ ಜೀವಕ್ಕೆ ಅಪಾಯವಿದೆ, ಕೊಲೆಗೂ ಸಂಚು ನಡೆಸಲಾಗುತ್ತಿದೆ” ಎಂದು ವಿಧಾನಪರಿಷತ್​ ಸದಸ್ಯ ಸಿ.ಟಿ.ರವಿ ಆರೋಪಿಸಿದ್ದಾರೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ವಿಧಾನ ಪರಿಷತ್​ನಲ್ಲಿ ಅಶ್ಲೀಲ ಪದ ಬಳಸಿದ ಆರೋಪದಡಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ಗುರುವಾರ ಸಂಜೆ ಹಿರೇಬಾಗೇವಾಡಿ ಪೊಲೀಸರು ಬಂಧಿಸಿದ್ದರು. ಬಳಿಕ ಅವರನ್ನು ಖಾನಾಪುರ ಠಾಣೆಗೆ ಕರೆತರಲಾಗಿತ್ತು. ಈ ವೇಳೆ ಸಿ.ಟಿ.ರವಿ ವಿಡಿಯೋ ಮೂಲಕ ಆರೋಪಗಳನ್ನು ಮಾಡಿದ್ದಾರೆ.ಕಾಂಗ್ರೆಸ್​ ಸರ್ಕಾರವೇ ಜವಾಬ್ದಾರಿ: ”ಸುಮಾರು 8 ಗಂಟೆಗೆ ನಮ್ಮನ್ನು ಖಾನಾಪುರ ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ನನ್ನ ಮೇಲೆ ಯಾವ ಮೊಕದ್ದಮೆ ದಾಖಲಾಗಿದೆ ಎಂಬುದನ್ನು ಹೇಳಿಲ್ಲ. ನಾನು ಕೊಟ್ಟ ದೂರಿಗೆ ಎಫ್​ಐಆರ್​ ದಾಖಲಿಸಿಲ್ಲ. ನನ್ನ ಜೀವಕ್ಕೇನಾದರೂ ಅಪಾಯವಾದರೆ ಕಾಂಗ್ರೆಸ್​ ಸರ್ಕಾರವೇ ಜವಾಬ್ದಾರಿಯಾಗಿದೆ. ನನ್ನ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಿ, ಸುಳ್ಳು ದೂರು ಕೊಟ್ಟು ನನ್ನನ್ನು ಕೊಲೆ ಮಾಡುವ ಸಂಚು ಮಾಡಲಾಗಿದೆ. ಈ ಬಗ್ಗೆ ನಾನು ಸಭಾಪತಿಗಳಿಗೂ ದೂರು ನೀಡಿದ್ದೇನೆ. ಠಾಣೆಗೆ ಬಂದು ಮೂರು ಮುಕ್ಕಾಲು ಗಂಟೆಯಾದರೂ ಕೂಡ ಏನು ದೂರಿದೆ, ನಮಗೇನು ಬೇಕು ಅಂತಲೂ ಕೇಳಿಲ್ಲ. ಹೀನಾಯವಾಗಿ ನಡೆಸಿಕೊಳ್ಳಲಾಗುತ್ತಿದೆ” ಎಂದು ಆಪಾದಿಸಿದರು.


Spread the love

About Laxminews 24x7

Check Also

ಮಿರಜ್‌ನಲ್ಲಿ 1 ಕೋಟಿ ರೂಪಾಯಿ ಮೌಲ್ಯದ ನಕಲಿ ನೋಟುಗಳ ಜಪ್ತಿ

Spread the love ಚಿಕ್ಕೋಡಿ:ಮಹಾರಾಷ್ಟ್ರ- ಕರ್ನಾಟಕ ಗಡಿ ಭಾಗದಲ್ಲಿ ಇತ್ತಿಚಿಗೆ ವಿಶೇಷ ಕಾರ್ಯಾಚರಣೆ ನಡೆಸಿದ ಮಹಾರಾಷ್ಟ್ರ ಪೊಲೀಸರು, ಬರೋಬ್ಬರಿ 1 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ