Breaking News

ಮಲ್ಪೆ ಬೀಚ್​ನಲ್ಲಿ ಜನವೋ ಜನ

Spread the love

ಉಡುಪಿ: ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ ಇತ್ತೀಚೆಗೆ ನಾಲ್ವರು ವಿದ್ಯಾರ್ಥಿನಿಯರು ಬಲಿಯಾದ ಬಳಿಕ ಬೀಚ್​ಗೆ ಪ್ರವೇಶ ನಿರ್ಬಂಧಿಸಲಾಗಿದೆ. ಹಾಗಾಗಿ ಶಾಲಾ ಪ್ರವಾಸಕ್ಕೆಂದು ಬರುವವರು ಮಲ್ಪೆ ಬೀಚ್ ಅನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಬೀಚ್​ನಲ್ಲಿ ಆಟ ಆಡುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ನೀರಿಗಿಳಿಯುವ ಮಕ್ಕಳನ್ನು ತಡೆಯುವುದೇ ಒಂದು ಸವಾಲಾಗಿದೆ. ಮಲ್ಪೆ ಬೀಚ್​ನಲ್ಲಿ ಶಾಲಾ ಮಕ್ಕಳ ಮೇಲೆ ಶಿಕ್ಷಕರು ನಿಗಾ ವಹಿಸುವ ಜೊತೆಗೆ ಜಿಲ್ಲಾಡಳಿತ ಮತ್ತಷ್ಟು ಎಚ್ಚರ ವಹಿಸಬೇಕಿದೆ.

ಮಾತು ಕೇಳದ ವಿದ್ಯಾರ್ಥಿಗಳು, ಪ್ರವಾಸಿಗರು: “ಸಮುದ್ರ ಅಲೆಗಳನ್ನು ಕಂಡ ಕೂಡಲೇ ಮಕ್ಕಳು ನೀರಿಗಿಳಿದು ಮೈಮರೆಯುತ್ತಾರೆ. ಆದರೆ ಸೌಂದರ್ಯ ತುಂಬಿದ ಸಮುದ್ರದಲ್ಲಿ ಅಪಾಯವೂ ಇರುವುದರ ಬಗ್ಗೆ ಪ್ರವಾಸಿಗರಿಗೆ ಅರಿವು ಇರುವುದಿಲ್ಲ. ಶಾಂತವಾಗಿ ಕಾಣುವ ಸಮುದ್ರದ ದೂರ ದೂರಕ್ಕೆ ಈಜುವ ಪಯತ್ನ ಮಾಡುತ್ತಾರೆ. ಅದೆಷ್ಟೋ ಮಂದಿ ಕೆರೆಯಲ್ಲಿ, ನದಿ ಈಜಿದಂತೆ ಸಮುದ್ರದಲ್ಲಿ ಈಜುವ ಹುಚ್ಚು ಧೈರ್ಯ ಮಾಡಿ ಅಪಾಯವನ್ನು ತಂದುಕೊಳ್ಳುತ್ತಾರೆ. ಸದ್ಯ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಮಲ್ಪೆ ಬೀಚ್​ಗೆ ಶಾಲಾ ಪ್ರವಾಸದ ದಂಡು ಹರಿದು ಬರುತ್ತಿದೆ. ಪ್ರವಾಸಕ್ಕೆ ಬಂದ ಮಕ್ಕಳನ್ನು ನೀರಿಗಿಳಿಯದಂತೆ ತಡೆಯುವುದೇ ಒಂದು ಸಾಹಸವಾಗಿದೆ” ಎನ್ನುತ್ತಾರೆ ವಾಟರ್​ ಸ್ಪೋರ್ಟ್ಸ್​ ನಿರ್ವಾಹಕ ಶರತ್​ ಶೆಟ್ಟಿ.ಡಿಸೆಂಬರ್, ಜನವರಿ ಬಂತೆಂದೆರೆ ಎಲ್ಲ ಶಾಲಾ ಮಕ್ಕಳ ಶೈಕ್ಷಣಿಕ ಪ್ರವಾಸ ಆರಂಭವಾಗುತ್ತದೆ. ಪ್ರತಿದಿನ ಸಾವಿರಾರು ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಉಡುಪಿ ಕಡೆ ಬರುತ್ತಾರೆ.

ಉಡುಪಿ ಕೃಷ್ಣ ದರ್ಶನ ಪೂರೈಸಿ, ಮಲ್ಪೆಯತ್ತ ಧಾವಿಸುತ್ತಾರೆ. ಆದರೆ ಸಮುದ್ರಕ್ಕೆ ಇಳಿದು ಅಲೆಗಳ ಜೊತೆಗೆ ಆಟವಾಡದಂತೆ ತಡೆಯುವುದು ಕಷ್ಟ ಸಾಧ್ಯವಾಗಿದೆ. ಸಮುದ್ರದಲ್ಲಿ ಕಾಲ ಕಳೆಯುವ ಪ್ರವಾಸಿಗರ ಮೇಲೆ ನಿಗಾ ವಹಿಸಲು, ಈಜಾಡದಂತೆ ತಡೆಯುವುದಕ್ಕೆ ಮಲ್ಪೆ ಬೀಚ್​ನಲ್ಲಿ ಹೆಚ್ಚಿನ ಲೈಫ್ ಗಾರ್ಡ್​ಗಳ ಅಗತ್ಯವಿದೆ. ಜೊತೆಗೆ ಶಿಕ್ಷಕರು ಕೂಡ ಮಕ್ಕಳ ಬಗ್ಗೆ ಎಚ್ಚರಿಕೆ ವಹಿಸಬೇಕು. ಪ್ರವಾಸಿಗರು, ದೂರ ನಿಂತು ಸಮುದ್ರ ನೋಡಿ ತೀರ ಪ್ರದೇಶದಲ್ಲಿ ಮಾತ್ರ ಆಟವಾಡಿ ಎನ್ನುವ ಬೀಚ್ ನಿರ್ವಾಹಕರ ಮಾತಿಗೆ ಬೆಲೆ ಕೊಡುವುದಿಲ್ಲ. ನಿಗದಿತ ಸ್ಥಳದಲ್ಲಿ ಮಾತ್ರ ಈಜಾಡಲು ಸೂಚನೆ ನೀಡಿದರೂ, ಪಾಲಿಸುತ್ತಿಲ್ಲ. ಈ ಎಲ್ಲ ಕಾರಣದಿಂದಲೇ ಮಲ್ಪೆ ಪ್ರವಾಸ ಸವಾಲಾಗಿ ಪರಿಣಮಿಸಿದೆ” ಎಂದು ಅವರು ವಿವರಿಸಿದರು.


Spread the love

About Laxminews 24x7

Check Also

ತಂದೆಗೆ ಲಿವರ್ ದಾನ ಮಾಡಿ ಮಹಾದಾನಿ ಆದ ಮಗ

Spread the loveಬೆಳಗಾವಿ: ಲಿವರ್ ಸಂಪೂರ್ಣವಾಗಿ ನಿಷ್ಕ್ರೀಯವಾಗಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ರೋಗಿಗೆ ಯಶಸ್ವಿ ಲಿವರ್ ಕಸಿ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಿ ಜೀವವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ