Breaking News

ಅವಾಚ್ಯ ಪದ ಬಳಕೆ ಮಾಡಿದ ಯಾವುದೇ ರೆಕಾರ್ಡ್ ಲಭ್ಯವಾಗಿಲ್ಲ: ಸಭಾಪತಿ ಹೊರಟ್ಟಿ

Spread the love

ಹುಬ್ಬಳ್ಳಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಬಿಜೆಪಿ ಎಂಎಲ್​ಸಿ ಸಿ.ಟಿ.ರವಿ ಅವರು ಮಾತನಾಡಿದ್ದಾರೆ ಎನ್ನಲಾದ ಯಾವುದೇ ಅವಾಚ್ಯ ಪದ ಬಳಕೆ ರೆಕಾರ್ಡ್​ ಇಲ್ಲ. ಆದರೆ, ಆಕ್ಷೇಪಾರ್ಹ ಪದ ಬಳಸಿದ್ದಾರೆಂದು ನಾಲ್ವರು ಸಾಕ್ಷಿ ಹೇಳಿದ್ದಾರೆ ಎಂದು ವಿಧಾನ ಪರಿಷತ್​​ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.

ನಗರದಲ್ಲಿಂದು ತಮ್ಮ ನಿವಾಸದಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಆಡಿಯೋ ರೆಕಾರ್ಡ್​ ಆಗಿಲ್ಲ. ಸಾಕ್ಷಿಗಳು ಮಾತ್ರ ಇವೆ. ರೆಕಾರ್ಡ್​ ಹುಡುಕಿದ್ದೇನೆ. ನಮಗೆ ಆಡಿಯೋ ಸಿಕ್ಕಿಲ್ಲ. ನಾಲ್ಕು ಜನರು ಸಾಕ್ಷಿ ಹೇಳಿದ್ದಾರೆ. ಸಿಟಿ ರವಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್​ ಇಬ್ಬರ ದೂರನ್ನೂ ಪಡೆದಿದ್ದೇವೆ ಎಂದು ತಿಳಿಸಿದರು.

ಸದನದಲ್ಲಿ ಪ್ರಶ್ನೋತ್ತರ ವೇಳೆ ಮುಗಿದ ಬಳಿಕ, ಕಾಂಗ್ರೆಸ್​ನವರು ಕೇಂದ್ರ ಸಚಿವ ಅಮಿತ್ ಶಾ ಅವರ ವಿರುದ್ದ ಪ್ರತಿಭಟನೆಗೆ ಮುಂದಾದರು. ಈ ವೇಳೆ ಗಲಾಟೆ ಆಯ್ತು. ಗಲಾಟೆ ಹಿನ್ನೆಲೆ ಕಲಾಪ ಮುಂದೂಡಿದೆ. ಆಗ ಇದೆಲ್ಲ ಗಲಾಟೆ ಆಗಿದೆ. ಸಂಜೆ 6 ಗಂಟೆಗೆ ಸಿಟಿ ರವಿ ಬಂಧನವಾಗಿರುವ ಬಗ್ಗೆ ಮಾಹಿತಿ ಬಂದಿದೆ ಎಂದು ಹೊರಟ್ಟಿ ತಿಳಿಸಿದರು.

ನಾನು ಲಕ್ಷ್ಮೀ ಹೆಬ್ಬಾಳ್ಕರ್​ ಹಾಗೂ ಸಿಟಿ ರವಿ ಅವರನ್ನು ಕರೆದು ಮಾತನಾಡಿದೆ‌. ಇದನ್ನು ಇಲ್ಲಿಗೆ ಮುಗಿಸೋಣ ಅಂತ ಸಲಹೆ ಕೂಡ ನೀಡಿದೆ. ನಾನು ಹತಾಶರಾಗಿದ್ದಾರೆ ಎಂದಿದ್ದೇನೆ. ಅದನ್ನು ತಪ್ಪಾಗಿ ಅರ್ಥ ಮಾಡಿಕೊಳ್ಳಲಾಗಿದೆ ಅಂತ ಸಿಟಿ ರವಿ ಅವರು ಹೇಳಿದ್ದಾರೆ. ಈ ರೀತಿ ಆಗಿರುವುದು ಮೊದಲ ಸಲ. 45 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಇಂತಹ ಘಟನೆ ಆಗಿರಲಿಲ್ಲ. ಒಂದೊಂದು ಸಲ ಯಾಕಾದರೂ ಅಲ್ಲಿ ಕೂತಿದ್ದೇನೆ ಅನಿಸುತ್ತೆ ಎಂದು ಹೊರಟ್ಟಿ ಅಸಮಾಧಾನ ಹೊರಹಾಕಿದರು.


Spread the love

About Laxminews 24x7

Check Also

ಮಿರಜ್‌ನಲ್ಲಿ 1 ಕೋಟಿ ರೂಪಾಯಿ ಮೌಲ್ಯದ ನಕಲಿ ನೋಟುಗಳ ಜಪ್ತಿ

Spread the love ಚಿಕ್ಕೋಡಿ:ಮಹಾರಾಷ್ಟ್ರ- ಕರ್ನಾಟಕ ಗಡಿ ಭಾಗದಲ್ಲಿ ಇತ್ತಿಚಿಗೆ ವಿಶೇಷ ಕಾರ್ಯಾಚರಣೆ ನಡೆಸಿದ ಮಹಾರಾಷ್ಟ್ರ ಪೊಲೀಸರು, ಬರೋಬ್ಬರಿ 1 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ