Breaking News

ಸದನದಲ್ಲಿ ಅವಾಚ್ಯ ಪದ ಬಳಕೆ ವಿಚಾರ ಯಾರೂ ಖಂಡಿಸದೇ ಇರುವುದು ನೆನೆದು ಗದ್ಗದಿತರಾದ ಲಕ್ಷ್ಮಿ ಹೆಬ್ಬಾಳ್ಕರ್

Spread the love

ಬೆಳಗಾವಿ: ನಿನ್ನೆ ವಿಧಾನಪರಿಷತ್​ನಲ್ಲಿ ನಡೆದ ಘಟನೆ ಸಂಬಂಧ ಇಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸುದ್ದಿಗೋಷ್ಠಿ ನಡೆಸಿದರು. ಸದನದಲ್ಲಿ ಈ ವಿಚಾರ ಯಾರೂ ಖಂಡಿಸದೇ ಇರುವುದನ್ನು ನೆನೆದು ಗದ್ಗದಿತರಾದರು.

ಬಿಜೆಪಿ ಸದಸ್ಯ ಸಿ.ಟಿ. ರವಿ ಅಶ್ಲೀಲ ಪದ ಪ್ರಯೋಗದ ಹಿನ್ನೆಲೆ ಇಂದು ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ‌ ನಡೆಸಿದ ಲಕ್ಷ್ಮಿ ಹೆಬ್ಬಾಳ್ಕರ್​ ಅವರು, “ಡಾ.ಬಿ. ಆರ್. ಅಂಬೇಡ್ಕರ್​ ಅವರಿಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ನಾವು ಸದನದಲ್ಲಿ ಪ್ರತಿಭಟನೆ ಮಾಡುತ್ತಿದ್ದೆವು. ಧರಣಿ ಮಾಡಿ ಮುಗಿದು ನಾವು ಕುಳಿತಿದ್ದೆವು.

ನನ್ನ ಸೀಟ್​ ಮೇಲೆ ಸುಮ್ಮನೆ ಕುಳಿತಿದ್ದೆ. ಆಗ ರಾಹುಲ್​ ಗಾಂಧಿ ಬಗ್ಗೆ ಡ್ರಗ್​ ಎಡಿಕ್ಟ್​ ಅಂತ ಸಿಟಿ ರವಿ ಅವರು ಅಂದರು. ತಾವು ಸಹ ಅಪಘಾತ ಮಾಡಿದ್ದೀರಿ ತಾವೂ ಸಹ ಕೊಲೆಗಾರ ಆಗುತ್ತೀರಿ , ಆಗುತ್ತೀರಾ ಅಂದೆ. ನನಗೆ ಬಳಿಕ ಆ ಶಬ್ದವನ್ನು ಸಿಟಿ ರವಿ ಒಮ್ಮೆ ಅಲ್ಲ, ಹತ್ತು ಬಾರಿ ಹೇಳಿದರು. ನನ್ನ ತೇಜೋವಧೆ ಮಾಡಿದರು. ಇದಕ್ಕೆಲ್ಲ ನಾನು ಹೆದರುವುದಿಲ್ಲ” ಎನ್ನುತ್ತಲೇ ಆ ಘಟನೆ ನೆನೆದು ಲಕ್ಷ್ಮಿ ಹೆಬ್ಬಾಳ್ಕರ್ ಭಾವುಕರಾದರು.


Spread the love

About Laxminews 24x7

Check Also

ಸಿಎಂ ಹುದ್ದೆಯ ರೇಸಿನಿಂದ ಹಿಂದೆ ಸರಿದವರು

Spread the love ಕಳೆದ ವಾರ ವಿದಾನಮಂಡಲ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಕುತೂಹಲಕಾರಿ ವಿಷಯವೊಂದು ಹೊರಬಿತ್ತು.ಅದರ ಪ್ರಕಾರ ಕರ್ನಾಟಕದಲ್ಲಿ ಮತ್ತೊಮ್ಮೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ