Breaking News

ಜೈನ ಸಮುದಾಯದ ಅದ್ಧೂರಿ ಶೋಭಾಯಾತ್ರೆಗೆ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ಚಾಲನೆ ನೀಡಿದರು.

Spread the love

ತುಮಕೂರು: ಶ್ರವಣಬೆಳಗೊಳದ ದಿಗಂಬರ ಜೈನ ಮಠದ ಪೀಠಾಧ್ಯಕ್ಷ ಅಭಿನವ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಇದೇ ಮೊದಲ ಬಾರಿ ತುಮಕೂರು ನಗರಕ್ಕೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಶೋಭಾಯಾತ್ರೆಗೆ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ಚಾಲನೆ ನೀಡಿದರು.

ನಗರದ ಮಹಾವೀರ ಭವನದ ಬಳಿಯಿಂದ ಹೊರಟ ಶೋಭಾಯಾತ್ರೆಯಲ್ಲಿ ಅಭಿನವ ಶ್ರೀಗಳನ್ನು ಪಲ್ಲಕ್ಕಿಯಲ್ಲಿ ಹೊತ್ತು ಸಾಗಲಾಯಿತು. ಅವರೊಂದಿಗೆ ಮಹಿಳೆಯರು ಪೂರ್ಣ ಕುಂಭ ಕಳಸ ಹೊತ್ತು ಸಾಗಿದರೆ, ವಾದ್ಯ ವೃಂದ ಹಾಗೂ ಜೈನ ಸಮುದಾಯದವರು ಶೋಭಾಯಾತ್ರೆಯಲ್ಲಿ ಪಾಲ್ಕೊಂಡು ಪುನೀತರಾದರು. ಶೋಭಯಾತ್ರೆಯು ಎಂ.ಜಿ. ರಸ್ತೆ, ಗುಂಚಿ ಚೌಕ, ಚರ್ಚ್ ಸರ್ಕಲ್, ಮಂಡಿಪೇಟೆ ಸರ್ಕಲ್ ಮಾಗವಾಗಿ ಪಾರ್ಶ್ವನಾಥ ದಿಗಂಬರ ಜಿನಮಂದಿರ ತಲುಪಿತು. ಜಿನಮಂದಿರದಲ್ಲಿ ಶ್ರೀ ಪಾರ್ಶ್ವನಾಥ ಸ್ವಾಮಿಗೆ ಪಂಚಾಮೃತ ಅಭಿಷೇಕ ಮತ್ತು ವಿಶೇಷ ಪೂಜಾದಿಗಳನ್ನು ಶ್ರೀ ಅಭಿನವ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನೇತೃತ್ವದಲ್ಲಿ ನೆರವೇರಿಸಲಾಯಿತು.


Spread the love

About Laxminews 24x7

Check Also

ಗೃಹ ಸಚಿವರ ತವರಲ್ಲೇ ಸಕ್ರಿಯವಾಗಿದೆ ಡ್ರಗ್ಸ್ ಮಾಫಿಯಾ…!

Spread the loveಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದವರು ಅರೆಸ್ಟ್.. ತುಮಕೂರು: ನಗರದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಸರಬರಾಜು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ