Breaking News

ಸಾರಿಗೆ ಇಲಾಖೆಗೆ ನೀಡಬೇಕಿರುವ 414 ಕೋಟಿ ರೂ. ಅನ್ನು ಸರ್ಕಾರ ಬಾಕಿ ಉಳಿಸಿಕೊಂಡಿದೆ.

Spread the love

ಹುಬ್ಬಳ್ಳಿ, ಡಿಸೆಂಬರ್​ 22: ಬಾಕಿ ಇರುವ 414 ಕೋಟಿ ರೂ. ಬಿಡುಗಡೆ ಮಾಡುವಂತೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ (NWKSRTC)ದ ವ್ಯವಸ್ಥಾಪಕ ನಿರ್ದೇಶಕಿ ಎಮ್​. ಪ್ರಿಯಾಂಗಾ ಅವರು ಆರ್ಥಿಕ ಇಲಾಖೆಗೆ ಪತ್ರ ಬರೆದಿದ್ದಾರೆ. ಈ ವಿಚಾರವಾಗಿ ಎಮ್​. ಪ್ರಿಯಾಂಗಾ ಮಾತನಾಡಿ, ನಾಲ್ಕು ವಿಭಾಗದ ನಿರ್ದೇಶಕ ಮಂಡಳಿಯಲ್ಲೂ ಈ ವಿಚಾರ ಚರ್ಚೆಯಾಗಿದೆ. ಹಣ ಬಿಡುಗಡೆ ಮಾಡುವಂತೆ ಆರ್ಥಿಕ ಇಲಾಖೆಗೆ ಪತ್ರ ಬರೆದಿದ್ದೇವೆ. ಹಣ ಬಿಡುಗಡೆ ‌ಮಾಡುತ್ತೇವೆ ಎಂದಿದ್ದಾರೆ ಎಂದು ತಿಳಿಸಿದರು.

ಸಾರಿಗೆ ಇಲಾಖೆಗೆ ನೀಡಬೇಕಿದ್ದ 414 ಕೋಟಿ ರೂ. ಬಾಕಿ ಉಳಿಸಿಕೊಂಡ ಸರ್ಕಾರ

ಎನ್​ಡಬ್ಲೂಕೆಎಸ್​ಆರ್​ಟಿಸಿಯಲ್ಲಿ ಒಂದು ದಿನಕ್ಕೆ ಸುಮಾರು 25 ಲಕ್ಷ ಜನ ಪ್ರಯಾಣ ಮಾಡುತ್ತಾರೆ. ಇದರಲ್ಲಿ ಸರಾಸರಿ 16 ಲಕ್ಷ ಜನ ಶಕ್ತಿ ಯೋಜನೆ ಫಲಾನುಭವಿಗಳು ಪ್ರಯಾಣ ಮಾಡುತ್ತಾರೆ. ಒಂದು ತಿಂಗಳಿಗೆ 120 ಕೋಟಿ ಶೂನ್ಯ ಟಿಕೆಟ್ ಪ್ರಯಾಣದ ದರವಾಗತ್ತೆ. ಈ‌ ಪೈಕಿ ಸರ್ಕಾರದಿಂದ 102 ಕೋಟಿ ಹಣ ವಾಪಸ್ ಬರುತ್ತಿದೆ. ಬಾಕಿ 414 ಕೋಟಿ ಹಣ ಬರಬೇಕಾಗಿದೆ. ಈ ವಿಚಾರ ಸರ್ಕಾರದ ಗಮನಕ್ಕೆ ತಂದಿದ್ದೇವೆ. ಆದಷ್ಟು ಬೇಗ ಹಣ ಬಿಡುಗಡೆ ಮಾಡುತ್ತೇವೆ ಅಂತ ಹೇಳಿದ್ದಾರೆ ಎಂದು ಹೇಳಿದರು.


Spread the love

About Laxminews 24x7

Check Also

ಬಂಡೀಪುರ ಸಫಾರಿ ಪುನಾರಂಭಕ್ಕೆ ರೈತ ಸಂಘದ ವಿರೋಧ: ಗುಂಡ್ಲುಪೇಟೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

Spread the love​ಗುಂಡ್ಲುಪೇಟೆ: ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿ ಪುನಾರಂಭಿಸಲು ಉದ್ದೇಶಿಸಿರುವ ಸರ್ಕಾರದ ನಿರ್ಧಾರದ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ