Breaking News
Home / ಜಿಲ್ಲೆ / ಬೆಳಗಾವಿ / ಬಾಲಕಿ ಬೇರೊಬ್ಬನೊಂದಿಗೆ ವಿವಾಹವಾಗಲು ಮುಂದಾಗಿರುವ ವಿಷಯ ತಿಳಿದು ಆಕೆಯನ್ನು ಕಣಕುಂಬಿ ಅರಣ್ಯಕ್ಕೆ ಬೈಕ್ ನಲ್ಲಿ ಕರೆದೊಯ್ದು ಕೊಲೆ

ಬಾಲಕಿ ಬೇರೊಬ್ಬನೊಂದಿಗೆ ವಿವಾಹವಾಗಲು ಮುಂದಾಗಿರುವ ವಿಷಯ ತಿಳಿದು ಆಕೆಯನ್ನು ಕಣಕುಂಬಿ ಅರಣ್ಯಕ್ಕೆ ಬೈಕ್ ನಲ್ಲಿ ಕರೆದೊಯ್ದು ಕೊಲೆ

Spread the love

ಬೆಳಗಾವಿ – 2019ರ ನವೆಂಬರ್ ತಿಂಗಳಲ್ಲಿ ಅಪಹರಣವಾಗಿದ್ದ ಅಪ್ರಾಪ್ತ ಬಾಲಕಿಯನ್ನು ನಂತರದಲ್ಲಿ ಕತ್ತು ಸೀಳಿ, ಕೊಲೆ ಮಾಡಿ ಕಣಕುಂಬಿ ಅರಣ್ಯದಲ್ಲಿ ಹೂತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಹಾರೂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಾಲಕಿಯನ್ನು ಅಪಹರಿಸಲಾಗಿತ್ತು. ಈ ಕುರಿತು ಪೊಲೀಸರು ವಿಶೇಷ ತಂಡ ರಚಿಸಿ ತನಿಖೆ ಕೈಗೊಂಡಿದ್ದರು.

ಹಿಡಕಲ್ ಗ್ರಾಮದ ಆದರ್ಶ ದತ್ತು ಪಾರ್ಥನಹಳ್ಳಿ ಎಂಬಾತ ಬಾಲಕಿಯೊಂದಿಗೆ ಸಲುಗೆಯಿಂದಿದ್ದ ಮಾಹಿತಿ ಅರಿತ ಪೊಲೀಸರು ತೀವ್ರ ತನಿಖೆ ನಡೆಸಿದಾಗ ಸಂಪೂರ್ಣ ವಿವರ ಹೊರಬಿದ್ದಿದೆ.

ಆದರ್ಶ ಮತ್ತು ಹಿಡಕಲ್ ಗ್ರಾಮದ ಕಿರಣ ಕೆಂಚಪ್ಪ ಜಗದಾಳ ಹಾಗೂ ಇನ್ನೋರ್ವ ಅಪ್ರಾಪ್ತ ಬಾಲಕ ಸೇರಿ ಕೃತ್ಯವೆಸಗಿರುವ ವಿಷಯ ಹೊರಬಿದ್ದಿದೆ.

ಆದರ್ಶ ಧಾರವಾಡದಲ್ಲಿ ವಾಸಿಸುತ್ತಿದ್ದು ಬಾಲಕಿಯನ್ನು 2020ರ ಮೇ ತಿಂಗಳವರೆಗೆ ಧಾರವಾಡದಲ್ಲಿಯೇ ತನ್ನ ರೂಂ ನಲ್ಲಿ ಇಟ್ಟುಕೊಂಡಿದ್ದ. ನಂತರ ನಿಪ್ಪಾಣಿ ಸಮೀಪ ತನ್ನ ಗೆಳೆಯನ ಸಂಬಂಧಿಕರ ಮನೆಯಲ್ಲಿಟ್ಟಿದ್ದ.

ಈ ವೇಳೆ ಬಾಲಕಿ ಬೇರೊಬ್ಬನೊಂದಿಗೆ ವಿವಾಹವಾಗಲು ಮುಂದಾಗಿರುವ ವಿಷಯ ತಿಳಿದು ಆಕೆಯನ್ನು ಕಣಕುಂಬಿ ಅರಣ್ಯಕ್ಕೆ ಬೈಕ್ ನಲ್ಲಿ ಕರೆದೊಯ್ದು ಕೊಲೆ ಮಾಡಿ ಹೂಳಿ ಹಾಕಿದ್ದ.

ಇದೀಗ ಎಲ್ಲ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಕಣಕುಂಬಿ ಅರಣ್ಯಕ್ಕೆ ಆರೋಪಿಗಳನ್ನು ಕರೆದೊಯ್ದು ಹೂತಿದ್ದ ಶವವನ್ನು ಹೊರತೆಗೆಸಿದ್ದಾರೆ. ಶವ ಸಂಪೂರ್ಣ ಕೊಳೆತುಹೋಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಹೆಚ್ಚುವರಿ ಎಸ್ಪಿ ಅಮರನಾಥ ರಡ್ಡಿ, ಅಥಣಿ ಡಿಎಸ್ಪಿ ಎಸ್.ವಿ. ಗಿರೀಶ್ , ರಾಯಬಾಗ ಸಿಪಿಐ ಕೆ.ಎಸ್.ಹಟ್ಟಿ ಮಾರ್ಗದರ್ಶನದಲ್ಲಿ ತನಿಖೆ ನಡೆದಿದೆ.

ಹಾರೂಗೇರಿ ಪಿಎಸ್ಐ ಯಮನಪ್ಪ ಮಾಂಗ ನೇತೃತ್ವದಲ್ಲಿ ತನಿಖೆ ನಡೆದಿತ್ತು.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ