Breaking News

ನಕಲಿ ಚಿನ್ನ ಅಡವಿಟ್ಟು ಕೋಟ್ಯಂತರ ರೂ ವಂಚನೆ

Spread the love

ಮಂಗಳೂರು, ಡಿಸೆಂಬರ್​ 25: ನಕಲಿ ಚಿನ್ನ (fake gold) ಅಡವಿಟ್ಟು ವ್ಯಕ್ತಿ ಓರ್ವ ರೂ. 2 ಕೋಟಿಗೂ ಅಧಿಕ ಸಾಲವನ್ನು ಪಡೆದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿರುವ ಸಮಾಜ ಸೇವಾ ಸಹಕಾರಿ ಸಂಘಕ್ಕೆ ವಂಚಿಸಿರುವ ಆರೋಪ ಕೇಳಿಬಂದಿತ್ತು.

ಆದರೆ, ಬ್ಯಾಂಕ್​​ನ ಪ್ರಧಾನ ಕಚೇರಿಯಿಂದ ಪ್ರಕರಣದ ಕುರಿತಾಗಿ ಸಮಜಾಯಿಷಿ ಸಂದೇಶ ನೀಡಿದ್ದು, ಸಮಾಜ ಸೇವಾ ಸಹಕಾರಿ ಸಂಘವು ಉತ್ತಮ ಲಾಭದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದೆ.

ಇದನ್ನು ಸಹಿಸಲಾಗದ ಕೆಲವರು ಸಂಘ, ಸಂಘದ ಆಡಳಿತ ಮಂಡಳಿಯ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದಿದ್ದಾರೆ.ಮೂಲಕ ಸಮಜಾಯಿಷಿಯ ಸಂದೇಶ ಕಳುಹಿಸಿರುವ ಬ್ಯಾಂಕ್, ನಮ್ಮ ಸಂಘದಲ್ಲಿ ಇಂತಹ ಒಂದು ಘಟನೆ ಆಗಿದೆ ಎಂದು ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ.

ಘಟನೆ ಬಗ್ಗೆ ನಾವು ಕಾನೂನು ರೀತಿಯಲ್ಲಿ ಎಲ್ಲಾ ಕ್ರಮಕೈಗೊಂಡಿದ್ದೇವೆ. ಯಾರ ಮೇಲೆ ಶಿಸ್ತು ಕ್ರಮಕೈಗೊಳ್ಳಬೇಕು ಅದನ್ನು ಕೂಡ ನಮ್ಮ ಸಂಘದ ಆಡಳಿತ ಮಂಡಳಿಯ ಸಭೆ ಕರೆದು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ತಂದೆಗೆ ಲಿವರ್ ದಾನ ಮಾಡಿ ಮಹಾದಾನಿ ಆದ ಮಗ

Spread the loveಬೆಳಗಾವಿ: ಲಿವರ್ ಸಂಪೂರ್ಣವಾಗಿ ನಿಷ್ಕ್ರೀಯವಾಗಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ರೋಗಿಗೆ ಯಶಸ್ವಿ ಲಿವರ್ ಕಸಿ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಿ ಜೀವವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ