Breaking News

ಹುಬ್ಬಳ್ಳಿ ಗ್ಯಾಸ್​ ಸಿಲಿಂಡರ್ ಸ್ಫೋಟ: ಚಿಕಿತ್ಸೆ ಫಲಿಸದೇ ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು

Spread the love

ಹುಬ್ಬಳ್ಳಿ: ಇಲ್ಲಿನ ಉಣಕಲ್‌ನ ಅಚ್ಚವ್ವ ಕಾಲೋನಿಯಲ್ಲಿ ಸಂಭವಿಸಿದ್ದ ಗ್ಯಾಸ್ ಸಿಲಿಂಡ‌ರ್ ಸ್ಪೋಟ ಪ್ರಕರಣದಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವನ್ನಪ್ಪಿದ್ದಾರೆ. ಈ ಮೂಲಕ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

ಘಟನೆಯಲ್ಲಿ 9 ಮಂದಿ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದರು. ಅವರಲ್ಲಿ ಅಜ್ಜಾಸ್ವಾಮಿ ಉರ್ಪ್ ನಿಂಗಪ್ಪ ಬೇಪಾರಿ(58) ಹಾಗೂ ಸಂಜಯ ಸವದತ್ತಿ (20) ಎಂಬ ಇಬ್ಬರು ಗುರುವಾರ ಬೆಳಗಿನ ಜಾವ ಮೃತಪಟ್ಟಿದ್ದರು. ಬಳಿಕ ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ರಾಜು ಮೂಗೇರಿ (21) ಕೂಡ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ.

ONE MORE AYYAPPA DEVOTEE DIED HUBBALLI CYLINDER BLAST INCIDENT DHARWAD ಅಯ್ಯಪ್ಪ ಮಾಲಾಧಾರಿ ಸಾವು UNAKAL CYLINDER BLAST

ಇನ್ನುಳಿದ ಗಾಯಾಳುಗಳಾದ ವಿನಾಯಕ ಬಾತಕೇರ (12), ಪ್ರಕಾಶ ಬಾರಕೇರ (42), ಮಂಜು ತೋರದ (22), ಪ್ರವೀಣ ಚಲವಾದಿ (24), ತೇಜಸ್ ರೆಡ್ಡಿ (26) ಮತ್ತು ಶಂಕರ ರಾಯನಗೌಡ್ರ (29) ಇವರುಗಳ ಸ್ಥಿತಿ ಇನ್ನೂ ಗಂಭೀರವಾಗಿದ್ದು, ಕೆಎಂಸಿಆರ್​ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಸಿಲಿಂಡರ್​ ಸ್ಫೋಟ: ಡಿಸೆಂಬರ್​ 23ರಂದು ಎಂದಿನಂತೆ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ತಮ್ಮ ವ್ರತವನ್ನು ಮುಗಿಸಿ, ಅಯ್ಯಪ್ಪನಿಗೆ ಪೂಜೆ ಸಲ್ಲಿಸಿ ನಿದ್ರೆಗೆ ಜಾರಿದ್ದರು. ಈ ಸಂದರ್ಭದಲ್ಲಿ ಓರ್ವ ಅಯ್ಯಪ್ಪ ಮಾಲಾಧಾರಿಯ ಕಾಲು ಗ್ಯಾಸ್ ಸಿಲಿಂಡರ್​ಗೆ ತಾಗಿದ ಪರಿಣಾಮ ಗ್ಯಾಸ್ ಸೋರಿಕೆಯಾಗಿದೆ. ದೇವರಿಗೆ ಹಚ್ಚಿದ್ದ ದೀಪ ಉರಿಯುತ್ತಿದ್ದರಿಂದ ಏಕಾಏಕಿ ಬೆಂಕಿ ಹೊತ್ತಿಕೊಂಡಿತ್ತು. ಘಟನೆಯಲ್ಲಿ 9 ಜನ ಅಯ್ಯಪ್ಪ ಮಾಲಾಧಾರಿಗಳಿಗೆ ಗಂಭೀರವಾಗಿ ಗಾಯಗಳಾಗಿದ್ದು, ಸ್ಥಳೀಯರು ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದರು. ಈ ಕುರಿತಂತೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಧಾರವಾಡದಲ್ಲಿ‌ ಸರ್ಕಾರಿ‌ ಕಚೇರಿ‌ ಆವರಣದಲ್ಲಿಯೇ ಕಳ್ಳರ ಕೈಚಳಕ‌ತೋರಿದ ಖದೀಮರು….. ಶ್ರೀಗಂಧ ಮರ ಕದ್ದುಕೊಂಡು ಹೋದ ಚಾಲಾಕಿ‌ ಕಳ್ಳರು

Spread the love ಧಾರವಾಡದಲ್ಲಿ‌ ಸರ್ಕಾರಿ‌ ಕಚೇರಿ‌ ಆವರಣದಲ್ಲಿಯೇ ಕಳ್ಳರ ಕೈಚಳಕ‌ತೋರಿದ ಖದೀಮರು….. ಶ್ರೀಗಂಧ ಮರ ಕದ್ದುಕೊಂಡು ಹೋದ ಚಾಲಾಕಿ‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ