Breaking News

ನಾಳೆ ಕರೆ ಕೊಟ್ಟಿದ್ದ ವಿಜಯಪುರ ಬಂದ್ ಮುಂದೂಡಿಕೆ

Spread the love

ವಿಜಯಪುರ, : ಬಿಆರ್​ ಅಂಬೇಡ್ಕರ್ ಅವರ ಕುರಿತಾಗಿ ಕೇಂದ್ರ ಸಚಿವ ಅಮಿತ್ ಶಾ (Amit Shah) ಅವಮಾನಕಾರಿ ಹೇಳಿಕೆ ಖಂಡಿಸಿ ವಿವಿಧ ದಲಿತ ಪರ ಸಂಘಟನೆಗಳು ನಾಳೆ ವಿಜಯಪುರ ಬಂದ್​ಗೆ ಕರೆ ನೀಡಿದ್ದರು. ಆದರೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನಲೆ ವಿಜಯಪುರ ಬಂದ್​ ಅನ್ನು ಹೋರಾಟಗಾರರು

ಮುಂದೂಡಿದ್ದಾರೆ. ನಾಳೆ ಬದಲಾಗಿ ಡಿಸೆಂಬರ್ 30ರಂದು ಬಂದ್​​ಗೆ ಕರೆ ನೀಡಿದ್ದಾರೆ.ಮಾಜಿ ಶಾಸಕ ಪ್ರೊ. ರಾಜು ಅಲಗೂರು, ಸೋಮನಾಥ ಕಳ್ಳಿಮನಿ, ಅಬ್ದುಲ್ ಹಮೀದ್ ಮುಶ್ರೀಫ್ ಹಾಗೂ ಇತರರಿಂದ ನಗರದ ಪ್ರವಾಸಿ ತಾಣದಲ್ಲಿ ಸುದ್ದಿಗೋಷ್ಟಿ ಮಾಡಿದ್ದು,

ಅಹಿಂದ, ಪ್ರಗತಿಪರ, ದಲಿತಪರ ಹಾಗೂ ವಿವಿಧ ಸಂಘಟನೆಗಳ‌ ನೇತೃತ್ವದಲ್ಲಿ ನಾಳೆ ಬೆಳಿಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿಜಯಪುರ ಬಂದ್​ಗೆ ಕರೆ ನೀಡಲಾಗಿತ್ತು. ಆದರೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಕಾರಣ ಬಂದ್ ಮುಂದೂಡಲಾಗಿದೆ. ಬಂದ್ ಮುಂದೂಡಿಕೆ ಬಗ್ಗೆ ಜಿಲ್ಲಾಡಳಿತಕ್ಕೂ ಮಾಹಿತಿ ನೀಡಿರುವುದಾಗಿ ತಿಳಿಸಿದ್ದಾರೆ.


Spread the love

About Laxminews 24x7

Check Also

2026ರ ಮೊದಲ ಚಂದ್ರಗ್ರಹಣ: ಈ ರಾಶಿಯವರಿಗೆ ಒಲಿಯಲಿದೆ ರಾಜಯೋಗ ಹೋಳಿ ಹಬ್ಬದಂದೇ ಯಾರಿಗೆ ಅದೃಷ್ಟ? ಯಾರಿಗೆ ಎಚ್ಚರಿಕೆ?

Spread the love2026ರ ವರ್ಷವು ಆಧ್ಯಾತ್ಮಿಕವಾಗಿ ಸಂಚಲನ ಮೂಡಿಸಲು ಸಜ್ಜಾಗಿದೆ. ಈ ಬಾರಿ ಬಣ್ಣಗಳ ಹಬ್ಬ ಹೋಳಿಯ ಸಂಭ್ರಮದ ನಡುವೆಯೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ