Breaking News

ವಕ್ಫ್ ಇಲಾಖೆಯಲ್ಲಿ ವ್ಯಾಪಕ ಪೆಟ್ರೋಲ್ ದುರ್ಬಳಕೆ ಪತ್ರ ಬರೆದ ಯತ್ನಾಳ್

Spread the love

ವಿಜಯಪುರ, ಡಿಸೆಂಬರ್​ 27: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್​​​ ಇಲಾಖೆಯಲ್ಲಿ (Waqf Board) ಮನಬಂದಂತೆ ಪೆಟ್ರೋಲ್ ಇಂಡೆಂಟ್​ಗಳನ್ನು ಬಳಸಿಕೊಂಡು ಸರ್ಕಾರಿ ವಾಹನ ಚಾಲಕರು ಹಾಗೂ ಪೆಟ್ರೋಲ್ ಸರ್ವಿಸ್ ಸ್ಟೇಷನ್​ಗಳು ದೊಡ್ಡ ಭ್ರಷ್ಟಾಚಾರವನ್ನು ಎಸಗಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ (Basangouda Patil Yatnal) ಆರೋಪ ಮಾಡಿದ್ದಾರೆ. ಈ ಕುರಿತಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದು ಸರ್ಕಾರದ ಎಲ್ಲ ಇಲಾಖೆಗಳಿಗೂ ಇಂಧನ ಮಿತಿ ಮಾರ್ಗಸೂಚಿ ಹೊರಡಿಸುವಂತೆ ಮನವಿ ಮಾಡಿದ್ದಾರೆ.

ಯತ್ನಾಳ್​ ಬರೆದ ಪತ್ರದಲ್ಲಿ ಏನಿದೆ?

ರಾಜ್ಯದ ತೆರಿಗೆ ಹಣವನ್ನು ಅತ್ಯಂತ ಜವಾಬ್ದಾರಿಯುತವಾಗಿ, ರಾಜ್ಯದ ಕಲ್ಯಾಣಕ್ಕೆ, ಅಭಿವೃದ್ಧಿ ಕಾರ್ಯಗಳಿಗೆ, ಉದ್ಯೋಗ ಸೃಜನೆ, ಮೂಲಸೌಕರ್ಯ ಅಭಿವೃದ್ಧಿ, ಬಡವರ, ರೈತರ ಶ್ರೇಯೋಭಿವೃದ್ಧಿಗೆ, ಮಹಿಳಾ ಸಬಲೀಕರಣ ಉಪಯೋಗಿಸಬೇಕು. ಆದರೆ, ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್​​ ಇಲಾಖೆಯಲ್ಲಿ ಮನಬಂದಂತೆ ಪೆಟ್ರೋಲ್ ಇಂಡೆಂಟ್​ಗಳನ್ನು ಬಳಸಿಕೊಂಡು ಸರ್ಕಾರಿ ವಾಹನ ಚಾಲಕರು ಹಾಗೂ ಪೆಟ್ರೋಲ್ ಸರ್ವಿಸ್ ಸ್ಟೇಷನ್​ಗಳು ದೊಡ್ಡ ಭ್ರಷ್ಟಾಚಾರವನ್ನು ಎಸಗಿದ್ದಾರೆ.

ಕಾರಿಗೆ ಪೆಟ್ರೋಲ್ ಹಾಕಿಸುವಾಗ ಸಂಬಂಧಪಟ್ಟ ಇಲಾಖೆಯ ಮೊಹರು ಇರಬೇಕು ಹಾಗೂ ಇಲಾಖೆಯ ಮುಖ್ಯಸ್ಥರ ಸಹಿ ಇರಬೇಕು. ಆದರೆ, ಅಲ್ಪಸಂಖ್ಯಾತ, ಹಜ್ ಮತ್ತು ವಕ್ಫ್​ ಇಲಾಖೆಯ ಕಾರ್ಯದರ್ಶಿಗಳಾದ ಮನೋಜ್ ಕುಮಾರ್ ಅವರ ವಾಹನ ಸಂ KA 01 GB 9990 ಗೆ ಇಂಡೆಂಟ್ ಗಳು ಇಲ್ಲದಿದ್ದರೂ ವೆಟ್ರೋಲ್ ತುಂಬಿಸಲಾಗಿರುವುದನ್ನು ಮಾಧ್ಯಮಗಳು ದಾಖಲೆ ಸಮೇತ ಬಯಲು ಮಾಡಿವೆ. ಕೇವಲ ಐದು ತಿಂಗಳಲ್ಲಿ ಈ ವಾಹನಕ್ಕೆ 390 ಲೀಟರ್ ವೆಟ್ರೋಲ್ ತುಂಬಿಸಲಾಗಿದೆ. ಚಾಲಕ ಮಹೇಶ್ ಎನ್ ಎಂಬುವವರು 2023 ಡಿಸೆಂಬರ್, 2024 ಜನವರಿ, ಫೆಬ್ರವರಿ, ಮಾರ್ಚ್ ಮತ್ತು ಮೇ ತಿಂಗಳ ಇಂಧನನಿಂದ ಬಿಲ್​ಗಳಲ್ಲಿ ವ್ಯತ್ಯಯ ಆಗಿರುವುದು ಗೊತ್ತಾಗಿದೆ. ಈ ಸಂಬಂಧ ಮಾಧ್ಯಮವೊಂದು ಬಿಡುಗಡೆ ಮಾಡಿರುವ ದಾಖಲೆಯನ್ನು ಈ ಪತ್ರದ ಮೂಲಕ ಲಗತ್ತಿರಿಸುತ್ತೇನೆ.


Spread the love

About Laxminews 24x7

Check Also

ತಂದೆಗೆ ಲಿವರ್ ದಾನ ಮಾಡಿ ಮಹಾದಾನಿ ಆದ ಮಗ

Spread the loveಬೆಳಗಾವಿ: ಲಿವರ್ ಸಂಪೂರ್ಣವಾಗಿ ನಿಷ್ಕ್ರೀಯವಾಗಿ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ರೋಗಿಗೆ ಯಶಸ್ವಿ ಲಿವರ್ ಕಸಿ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಿ ಜೀವವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ