Breaking News

ಮಹಿಳೆಯರ ಒಡವೆ ಮತ್ತು ಹಣ ಕಳವು ಮಾಡುತ್ತಿದ್ದ ಮೂವರು ಮಹಿಳೆಯರನ್ನು ಗೌರಿಬಿದನೂರು ನಗರ ಪೊಲೀಸರು ಬಂಧಿಸಿದ್ದಾರೆ.

Spread the love

ಚಿಕ್ಕಬಳ್ಳಾಪುರ: ಮಹಿಳೆಯರ ಒಡವೆ ಮತ್ತು ಹಣ ಕಳವು ಮಾಡುತ್ತಿದ್ದ ಮೂವರು ಮಹಿಳೆಯರನ್ನು ಗೌರಿಬಿದನೂರು ನಗರ ಪೊಲೀಸರು ಬಂಧಿಸಿದ್ದಾರೆ.

ನ.16ರಂದು ಶಾಂತಕುಮಾರಿ ಎಂಬವರು ತಾವು ಬೆಂಗಳೂರಿಗೆ ಹೋಗಲು ನಗರದ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದಲ್ಲಿ ಬಸ್ ಹತ್ತುವಾಗ ಕತ್ತಿನಲ್ಲಿದ್ದ ಸುಮಾರು 50 ಗ್ರಾಂ ತೂಕದ ಎರಡೆಳೆಯ ಬಂಗಾರದ ಚೈನ್ ಅನ್ನು ಬುರ್ಕಾ ಧರಿಸಿದ್ದ ಮಹಿಳೆಯರು ಕಳವು ಮಾಡಿರುವುದಾಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.ಡಿ.6ರಂದು ರತ್ನಮ್ಮ ಎಂಬವರು ತಾವು ಬೆಂಗಳೂರಿಗೆ ಹೋಗಲು ಬಸ್ ಹತ್ತುವಾಗ ಬ್ಯಾಗ್​ನಲ್ಲಿದ್ದ ಒಂದು ಲಕ್ಷ ರೂ. ಹಣವನ್ನು ಯಾರೋ ಕಳ್ಳರು ಕಳ್ಳತನ ಮಾಡಿರುವುದಾಗಿ ದೂರು ನೀಡಿದ್ದರು.

ಈ ಕುರಿತು ದೂರು ದಾಖಲಿಸಿಕೊಂಡಿದ್ದ ನಗರ ಠಾಣೆಯ ಪೊಲೀಸರು ನಗರದ ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣದ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಮತ್ತು ಇತರೆ ಸಾಕ್ಷ್ಯಗಳನ್ನು ಸಂಗ್ರಹಿಸಿ, ಆರೋಪಿಗಳನ್ನು ಪತ್ತೆ ಮಾಡಿ ಬಂಧಿಸಿದ್ದಾರೆ.

ಬಂಧಿತರನ್ನು ರೇಖಾ ಬಾಯಿ, ರೋಜಾ, ಕರೀನಾ ಎಂದು ಗುರುತಿಸಲಾಗಿದೆ. ಇವರು ಅಕ್ಕ-ತಂಗಿಯರು ಎಂದು ತಿಳಿದು ಬಂದಿದೆ.

ಆರೋಪಿಗಳು ತುಮಕೂರು, ಹೊಳೆನರಸೀಪುರ, ಹಲಸೂರು, ರಾಮನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.


Spread the love

About Laxminews 24x7

Check Also

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Spread the loveಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು  ಇಂದು ಭಾರತ್ ಬಂದ್‌ಗೆ  ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ