Breaking News

ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಕನ್ನಡ ಪರ ಸಂಘಟನೆ ಗಳು,ಎಲ್ಲಾ ಕನ್ನಡಿಗರನ್ನು ವಶಕ್ಕೆ ಪಡೆದ ಪೊಲೀಸ್

Spread the love

ಮರಾಠಾ ಅಭಿವೃದ್ಧಿ ಖಂಡಿಸಿ ಬಂದಗೆ ಘೋಷಣೆ ಮಾಡಿದ್ದರ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಬೆಳಗಾವಿ ಜಿಲ್ಲಾ ಕನ್ನಡ ಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ.

ಬೆಳಗಾವಿ ಚೆನ್ನಮ್ಮ ವೃತ್ತದಲ್ಲಿ ಕನ್ನಡಪರ ಸಂಘಟನೆಗಳ ಒಕ್ಕೂಟದಿಂದ ಮರಾಠ ಅಭಿವೃದ್ಧಿ ಪ್ರಾಧಿಕಾರ ಖಂಡಿಸಿ ಪ್ರತಿಭಟನೆ ನಡೆಸಿದರು.

ಇವತ್ತಿನ ದಿನದಲ್ಲಿ ರಾಜ್ಯ ಕಾರಕರಣಿ ಸಭೆ ಇದ್ದು ಬೆಳಗಾವಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆಗಮಿಸಿದ್ದು ಮುಖ್ಯಮಂತ್ರಿಗಳಿಗೆ ಬಿಸಿ ಮುಟ್ಟಿಸುವ ಉದ್ದೇಶಿದಿಂದ ಬೆಳಗಾವಿಯಲ್ಲಿ ಸಂಘಟನೆಗಳಿಂದ ಪ್ರತಿಭಟನೆ.

ವಿಜಾಪುರ ಶಾಸಕ ಬಸನಗೌಡ ಯತ್ನಾಳ್ ಹೇಳಿಕೆ ಖಂಡಿಸಿ ಮತ್ತು ಸರಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿದ್ದನ್ನು ಕನ್ನಡ ಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿ ಇವತ್ತು ವಾಟಾಳ ನಾಗರಾಜ್ ಅವರ ನೇತೃತ್ವದಲ್ಲಿ ಬಂದಗೆ ಕರೆ ನೀಡಿದ್ದು.

ಕನ್ನಡ ಪರ ಸಂಘಟನೆಗಳು ಘೋಷಣೆ ಹಾಕುವುದರ ಮೂಲಕ ಚೆನ್ನಮ್ಮ ವೃತ್ತದ ಬಳಿ ಇರುವ ಕನ್ನಡ ಸಾಹಿತ್ಯ ಭವನದಲ್ಲಿ ಬಂದಗೆ ಬೆಂಬಲ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು

ಕರ್ನಾಟಕದಲ್ಲಿ ಕನ್ನಡಪರ ಸಂಘಟನೆಗಳು ಹಲವಾರು ಜಿಲ್ಲೆಗಳಲ್ಲಿ ಬಂದ ಮಾಡಿದ್ದು ಅದೇ ರೀತಿ ಬೆಳಗಾವಿಯಲ್ಲೂ ಸಹ ಕನ್ನಡ ಪರ ಸಂಘಟನೆಗಳು ಬಂದಗೆ ಸ್ಪಂದಿಸಿದರು.

ನಂತರ ಪೊಲೀಸ್ ಅಧಿಕಾರಿಗಳು ಅವರನ್ನ ತಡೆ ಹಿಡಿದು ಬಂಧಿಸಿದ್ದರು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ