Breaking News

ಗೋಕರ್ಣ, ಮುರುಡೇಶ್ವರದ ಪ್ರವಾಸಿ ತಾಣಗಳು ಈಗಾಗಲೇ ಪ್ರವಾಸಿಗರಿಂದ ಕಿಕ್ಕಿರಿದು ತುಂಬಿವೆ.

Spread the love

ಕಾರವಾರ, ಡಿಸೆಂಬರ್ 28: ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡೇ ಆಗಮಿಸುತ್ತಿದೆ. ಕ್ರಿಸ್ಮಸ್ ರಜೆ,

ವಾರಾಂತ್ಯ, ಐಟಿ ಬಿಟಿ ಕಂಪನಿಗಳ ವರ್ಷಾಂತ್ಯದ ರಜೆಗಳು ಹೊಸ ವರ್ಷಾಚರಣೆಯ ಕಾರಣ ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ.

ಗೋಕರ್ಣ, ಮುರುಡೇಶ್ವರದ ಪ್ರವಾಸಿ ತಾಣಗಳು ಈಗಾಗಲೇ ಪ್ರವಾಸಿಗರಿಂದ ಕಿಕ್ಕಿರಿದು ತುಂಬಿವೆ. ಏತನ್ಮಧ್ಯೆ, ಹೊನ್ನಾವರ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಶನಿವಾರ ಬೆಳಗ್ಗೆ ಭಾರಿ ಟ್ರಾಫಿಕ್ ​​ಜಾಮ್​ ಉಂಟಾಯಿತು.

ವಾಹನಗಳು ಸುಮಾರು 1 ಕಿಲೋಮೀಟರ್​​ವರೆಗೆ ಸಾಲುಗಟ್ಟಿ ನಿಂತಿದ್ದವು. ಸಾಗರ ರಸ್ತೆಯಿಂದ ಹೊನ್ನಾವರ ನಿಲ್ದಾಣದವರೆಗೆ ಟ್ರಾಫಿಕ್​​ ಜಾಮ್​ ಇತ್ತು. ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದೇ ಇದಕ್ಕೆ ಕಾರಣ ಎನ್ನಲಾಗಿದೆ.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ