Breaking News

ಅಂಬೇಡ್ಕರ್ ಕುರಿತು ಅಮಿತ್​​​ ಶಾ ಹೇಳಿಕೆ ಖಂಡಿಸಿ ಬಳ್ಳಾರಿಯ ಕಂಪ್ಲಿ ಸಂಪೂರ್ಣ ಬಂದ್​!

Spread the love

ಬಳ್ಳಾರಿ: ಡಾ. ಬಿ.ಆರ್​​​. ಅಂಬೇಡ್ಕರ್​​​​ ಅವರ ಕುರಿತಾದ ಕೇಂದ್ರ ಗೃಹ ಸಚಿವ ಅಮಿತ್​​​ ಶಾ ಹೇಳಿಕೆ ಖಂಡಿಸಿ ಇಂದು ಜಿಲ್ಲೆಯ ಕಂಪ್ಲಿ ತಾಲೂಕು ಸಂಪೂರ್ಣ ಬಂದ್​ ಆಗಿದೆ.

ಸಂವಿಧಾನ ಶಿಲ್ಪಿ ಅಂಬೇಡ್ಕರ್​​​ ಅವರ ಬಗ್ಗೆ ಬಿಜೆಪಿಗರು ಅವಮಾನ ಮಾಡುವುದೇ ಕಾಯಕ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿರುವ ವಿವಿಧ ಸಂಘಟನೆಗಳ ಪ್ರತಿಭಟನಕಾರರು ಬೆಳಗ್ಗೆ 6 ಗಂಟೆಯಿಂದಲೇ ಬಂದ್​ ಆರಂಭಿಸಿದ್ದಾರೆ. ಬಂದ್​ ಇದ್ದರೂ ಕಂಪ್ಲಿಯಲ್ಲಿ ಎಂದಿನಂತೆ ದಿನಸಿ ಮಾರುಕಟ್ಟೆಗಳು, ಮತ್ತು ಆಟೋ, ಕ್ಯಾಬ್​ ಮಾತ್ರ ಓಪನ್ ಇತ್ತು. ಇವುಗಳನ್ನು 10 ಗಂಟೆ ಬಳಿಕ ಬಂದ್​ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಕನ್ನಡಪರ ಸಂಘಟನೆಗಳು, ವ್ಯಾಪಾರಿ ಸಂಘಟನೆಗಳು ಬಂದ್​ಗೆ ಸಂಪೂರ್ಣ ಬೆಂಬಲ ನೀಡಿದ್ದಾರೆ. ಶಾಲೆ ಕಾಲೇಜುಗಳಿಗೆ ಯಾವ ಸಮಸ್ಯೆ ನೀಡದೇ ಅವುಗಳು ಎಂದಿನಂತೆ ನಡೆಯಲು ಅವಕಾಶ ಮಾಡಿದ್ದಾರೆ. ಬಂದ್​​​ ಹಿನ್ನೆಲೆ ಕಂಪ್ಲಿ ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆಯಾಗಿ ನಗರದಾದ್ಯಂತ ಹಲವು ಕಡೆ ಅಲ್ಲಲ್ಲಿ ಪೊಲೀಸ್ ತುಕಡಿ ನಿಯೋಜನೆಗೊಂಡಿದೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ