Breaking News

ಆಂಟಿ ಪ್ರೀತ್ಸೆ’ ಅಂತ ಹಿಂದೆ ಬಿದ್ದ, ಒಪ್ಪದಿದ್ದಕ್ಕೆ ಬೆಂಕಿಯಿಟ್ಟ ಪಾಗಲ್ ಪ್ರೇಮಿ..!

Spread the love

ಚಿಕ್ಕಮಗಳೂರು, ಡಿ.5- ಆಂಟಿ ಪ್ರೀತ್ಸೇ ಎಂದು ಹಿಂದೆ ಬಿದ್ದಿದ್ದ ಯುವಕನ ಪ್ರೀತಿಯನ್ನು ನಿರಾಕರಿಸಿದ ವಿವಾಹಿತ ಮಹಿಳೆಗೆ ಪಾಗಲ್ ಪ್ರೇಮಿ ಬೆಂಕಿ ಹಚ್ಚಿ ಕೊಲೆ ಮಾಡಿರುವ ಘಟನೆ ಮೂಡಿಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾಲೂಕಿನ ಬಿಳಗುಳ ಗ್ರಾಮದ ವಿಶ್ವನಾಥ ಶೆಟ್ಟಿ ಎಂಬುವರ ಪುತ್ರಿ ಸವಿತಾ (40) ಪಾಗಲ್ ಪ್ರೇಮಿಯ ಪೈಶಾಚಿಕ ಕೃತ್ಯಕ್ಕೆ ಬಲಿಯಾದ ನತದೃಷ್ಟ ಮಹಿಳೆ.

ಸವಿತಾಳ ಮೇಲೆ ಬೆಂಕಿ ಹಚ್ಚಿದ ಪಾಗಲ್ ಪ್ರೇಮಿ ನಂದೀಶ್‍ಗೌಡನಿಗೆ ಸುಟ್ಟ ಗಾಯಗಳಾಗಿದ್ದು , ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ವಿವಾಹಿತಳಾಗಿದ್ದ ಸವಿತಾ ಪತಿಯನ್ನು ತೊರೆದು ಬಿಳಗುಳದಲ್ಲಿ ಪ್ರತ್ಯೇಕವಾಗಿ ವಾಸಿಸುತ್ತಾ ಸಮೀಪದ ಕೊಲ್ಲಿ ಬೆಲ್ ಹೋಂ ಸ್ಟೇಯಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದಳು.

ಪಕ್ಕದ ಎಸ್ಟೇಟ್‍ವೊಂದರಲ್ಲಿ ಚಾಲಕನಾಗಿದ್ದ 28 ವರ್ಷದ ನಂದೀಶ್‍ಗೌಡ 40 ವರ್ಷದ ಸವಿತಾಳನ್ನು ಪ್ರೀತಿಸುವಂತೆ ಪದೇ ಪದೇ ಒತ್ತಾಯಿಸುತ್ತಿದ್ದ ಎನ್ನಲಾಗಿದೆ.

ತನಗಿಂತ 12 ವರ್ಷ ಕಿರಿಯವನಾದ ನಂದೀಶ್‍ಗೌಡನನ್ನು ಪ್ರೀತಿಸಲು ಸವಿತಾ ನಿರಾಕರಿಸಿದ್ದಳು. ಸವಿತಾಳ ಈ ಧೋರಣೆಯಿಂದ ಕೋಪೆÇೀದ್ರಿಕ್ತನಾದ ಪಾಗಲ್ ಪ್ರೇಮಿ ಕಳೆದ ಭಾನುವಾರ ಹೋಂ ಸ್ಟೇಯಲ್ಲಿ ಅಡುಗೆ ಕೆಲಸ ಮಾಡಿಕೊಂಡು ಮನೆಗೆ ಹಿಂದಿರುಗುತ್ತಿದ್ದ ಸವಿತಾಳ ಮೈಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾನೆ.


Spread the love

About Laxminews 24x7

Check Also

ಚಿಕ್ಕಮಗಳೂರು ಡಿಸಿಸಿ ಬ್ಯಾಂಕಿಗೆ ಸಿ.ಟಿ.ರವಿ ಅಧ್ಯಕ್ಷ, ದಿನೇಶ್ ಹೊಸೂರು ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ

Spread the loveಚಿಕ್ಕಮಗಳೂರು: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್  ಅಧ್ಯಕ್ಷರಾಗಿ ಎಂಎಲ್‌ಸಿ ಸಿ.ಟಿ. ರವಿ ಹಾಗೂ ಉಪಾಧ್ಯಕ್ಷರಾಗಿ ಕೊಪ್ಪ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ