Breaking News

ನಾನು ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೀನಿ. ಮೊದಲ ಬಾರಿ ಸಿಎಂ ಆಗಿ ಹಲವಾರು ಭಾಗ್ಯಗಳು, ಈ ಬಾರಿ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೀನಿ

Spread the love

ನಮಗೆ ಸಿಕ್ಕಿರುವ ವಿದ್ಯೆ ಮತ್ತು ಅವಕಾಶಗಳ ಹಿಂದೆ ಸಮಾಜದ ಋಣ ಇದೆ. ಈ ಋಣ ತೀರಿಸುವುದು ನಮ್ಮ ಜವಾಬ್ದಾರಿ. ಎರಡು ಹೊತ್ತಿನ ಊಟಕ್ಕೆ ಶ್ರಮಿಸುತ್ತಿರುವ ಕಟ್ಟ ಕಡೆಯ ಜನರ ಪರವಾಗಿ ಅಧಿಕಾರಿಗಳು ಬದ್ಧತೆ ತೋರಿಸಬೇಕು. ಅಂಬೇಡ್ಕರ್ ಅವರ ಆಶಯ ಈಡೇರಿಸಲು ನಾವು ನಮಗೆ ಸಿಕ್ಕಿರುವ ಅವಕಾಶವನ್ನು ಬಳಸಿಕೊಂಡು ಕರ್ತವ್ಯ ನಿರ್ವಹಿಸಬೇಕು.
ನಾನು ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೀನಿ. ಮೊದಲ ಬಾರಿ ಸಿಎಂ ಆಗಿ ಹಲವಾರು ಭಾಗ್ಯಗಳು, ಈ ಬಾರಿ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೀನಿ. ಮನಮೋಹನ್ ಸಿಂಗ್ ಅವರು ಪ್ರಧಾನಿ ಆಗಿ ಆಹಾರ, ಶಿಕ್ಷಣ, ಮಾಹಿತಿ ಹಕ್ಕುಗಳನ್ನು ಕಡ್ಡಾಯ ಮಾಡುವ ಮೂಲಕ ಸಂವಿಧಾನದ ನಿರ್ದೇಶಕ ತತ್ವಗಳನ್ನು ಜನರ ಹಕ್ಕುಳನ್ನಾಗಿ ಮಾಡಿದರು. ಇವೆಲ್ಲವೂ ಅಂಬೇಡ್ಕರ್ ಅವರ ಆಶಯಗಳನ್ನು ಈಡೇರಿಸುವ ಉದ್ದೇಶವನ್ನೇ ಹೊಂದಿವೆ. ಆದ್ದರಿಂದ ಮಧ್ಯವರ್ತಿಗಳೇ ಇಲ್ಲದ ನಮ್ಮ ಗ್ಯಾರಂಟಿಗಳನ್ನು ಮನೆ ಮನೆ ತಲುಪಿಸಿ.
ಅಂಬೇಡ್ಕರ್ ಅವರಿಂದ ಬುದ್ದ, ಬಸವ, ಗಾಂಧಿ ಎಲ್ಲರೂ ಸಮಾಜದ ಸಮಾನತೆಗಾಗಿ, ತಾರತಮ್ಯದ ಸಮಾಜದ ಬದಲಾವಣೆಗಾಗಿ ಶ್ರಮಿಸಿದರು. ಆದರೂ ಇನ್ನೂ ಅಸಮಾನತೆ ಹೋಗಿಲ್ಲ ಎಂದರೆ ಎಲ್ಲರಿಗೂ ಸಮಾನ ಅವಕಾಶ ಸಿಗದೇ ಇರುವುದೇ ಮುಖ್ಯ ಕಾರಣ. ಆದ್ದರಿಂದ ಸಮಾಜದಲ್ಲಿ ಪಟ್ಟಭದ್ರರು ಇನ್ನೂ ಹೆಚ್ಚಾಗಿದ್ದಾರೆ.
ಸೂಟು ಬೂಟು ಹಾಕಿಕೊಂಡು ಬರುವವರನ್ನು ಕುರ್ಚಿಯಲ್ಲಿ ಕೂರಿಸಿ ಮಾತನಾಡಿಸುವುದನ್ನು, ಮಾಸಲು ಬಟ್ಟೆಯಲ್ಲಿ ಬರುವ ಬಡವರನ್ನು ನಿರ್ಲಕ್ಷ್ಯದಿಂದ ಕಾಣುವುದು ನಮ್ಮ ಮಾನಸಿಕ ಗುಲಾಮಗಿರಿಯ ಧ್ಯೋತಕ. ಇದನ್ನು ಕಿತ್ತೊಗೆದು ಪ್ರತಿಯೊಬ್ಬರಿಗೂ ಸಮಾಜದಲ್ಲಿ ಅವಕಾಶಗಳು ಸಿಗುವಂತೆ ನೋಡಿಕೊಳ್ಳಬೇಕು. ಎಲ್ಲಿಯವರೆಗೂ ಜಾತಿ, ವರ್ಗ ವ್ಯವಸ್ಥೆ ಇರುತ್ತದೋ ಅಲ್ಲಿಯವರೆಗೂ ಅಸಮಾನತೆ ಇರುತ್ತದೆ.
ಕೆಎಎಸ್ ಅಧಿಕಾರಿಗಳ ಸಂಘ ಮುಂದಿಟ್ಟಿರುವ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಕೆಎಎಸ್ ಅಧಿಕಾರಿಗಳ ಸಂಖ್ಯೆ ಹೆಚ್ಚಿಸಲು ನಾವು ಸಿದ್ದರಿದ್ದೇವೆ. ಆದರೆ ಸಂಖ್ಯೆ ಮುಖ್ಯವಲ್ಲ. ನಿಮ್ಮ ಗುಣಾತ್ಮಕ ಕರ್ತವ್ಯ, ಸೇವೆ ಮುಖ್ಯ.
ಕೆಎಎಸ್ ಅಧಿಕಾರಿಗಳ ಜೇಷ್ಠತಾ ಪಟ್ಟಿ ಸಿದ್ಧವಿದೆ. ಮುಂದಿನ ಹತ್ತು ದಿನಗಳ ಒಳಗಾಗಿ ಬಿಡುಗಡೆ ಆಗುತ್ತದೆ. ಕೆಎಎಸ್ ಅಧಿಕಾರಿಗಳ ಬಡ್ತಿ ಬೇಡಿಕೆಯನ್ನೂ ಪರಿಶೀಲಿಸಲಾಗುವುದು.
– ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘ ಹೊರತಂದಿರುವ ಕ್ಯಾಲೆಂಡರ್ ಮತ್ತು ದಿನಚರಿ ಬಿಡುಗಡೆ ಸಮಾರಂಭದಲ್ಲಿ ನನ್ನ ಮಾತುಗಳು

Spread the love

About Laxminews 24x7

Check Also

ಸಿಎಂ ಹುದ್ದೆಯ ರೇಸಿನಿಂದ ಹಿಂದೆ ಸರಿದವರು

Spread the love ಕಳೆದ ವಾರ ವಿದಾನಮಂಡಲ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಕುತೂಹಲಕಾರಿ ವಿಷಯವೊಂದು ಹೊರಬಿತ್ತು.ಅದರ ಪ್ರಕಾರ ಕರ್ನಾಟಕದಲ್ಲಿ ಮತ್ತೊಮ್ಮೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ