ಕೋಲಾರ : ಅಂಗನವಾಡಿ ಕಟ್ಟಡದ ಮೇಲ್ಛಾವಣಿ ಸಿಮೆಂಟ್ ಪ್ಲಾಸ್ಟರಿಂಗ್ ಬಿದ್ದು ನಾಲ್ಕು ಮಕ್ಕಳು ಗಾಯಗೊಂಡಿರುವ ಘಟನೆ ಬಂಗಾರಪೇಟೆ ತಾಲೂಕಿನ ದಾಸರಹೊಸಹಳ್ಳಿಯಲ್ಲಿ ನಡೆದಿದೆ. ಈ ಘಟನೆಯಲ್ಲಿ ಯಾರೊಬ್ಬರಿಗೂ ಪ್ರಾಣಾಪಾಯವಾಗಿಲ್ಲ. ಸಣ್ಣಪುಟ್ಟ ಗಾಯಗಳೊಂದಿಗೆ ಮಕ್ಕಳು ಚೇತರಿಸಿಕೊಂಡಿದ್ದಾರೆ.
ದಾಸರಹೊಸಹಳ್ಳಿಯ ಅಂಗನವಾಡಿಯ ಮೇಲ್ಛಾವಣಿಯ ಸಿಮೆಂಟ್ ಪ್ಲಾಸ್ಟರಿಂಗ್ ಬಿದ್ದಿರುವುದರಿಂದ ಅಂಗನವಾಡಿಯಲ್ಲಿದ್ದ ಏಳು ಮಕ್ಕಳಲ್ಲಿ ಲಿಖಿತ, ಪರಿಣಿತ, ಸಾನ್ವಿ, ಚರಿತಾಗೆ ಗಾಯಗಳಾಗಿದೆ.ದಾಸರಹೊಸಹಳ್ಳಿಯ ಬಾಲಸ್ನೇಹಿ ಅಂಗನವಾಡಿ ಕೇಂದ್ರ ಶಿಥಿಲಗೊಂಡಿತ್ತು. ಈ ಬಗ್ಗೆ ಅಂಗನವಾಡಿ ಕಾರ್ಯಕರ್ತೆ ಹಲವು ಬಾರಿ ಇಲಾಖೆಯ ಮೇಲಧಿಕಾರಿಗಳಿಗೆ, ಗ್ರಾಮ ಪಂಚಾಯಿತಿಯವರಿಗೆ ಅಂಗನವಾಡಿ ಕೇಂದ್ರವನ್ನ ದುರಸ್ತಿ ಮಾಡಿಕೊಡುವಂತೆ ಮನವಿ ಮಾಡಿದ್ರೂ ಪ್ರಯೋಜನವಾಗಿಲ್ಲ. ಆದರೆ, ಇದೀಗ ಅಂಗನವಾಡಿ ಕೇಂದ್ರದ ಮೇಲ್ಛಾವಣಿಯ ಸಿಮೆಂಟ್ ಪ್ಲಾಸ್ಟರಿಂಗ್ ಬಿದ್ದು ಅಪಾಯ ತಂದೊಡ್ಡಿದೆ.
Laxmi News 24×7