ಬೆಂಗಳೂರು: ಅರಣ್ಯ ಮತ್ತು ವನ್ಯಜೀವಿ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಚಾಲ್ತಿಯಲ್ಲಿರುವ ಕಾನೂನು ಚೌಕಟ್ಟನ್ನು ಬಲಪಡಿಸಲು ಗರುಡಾಕ್ಷಿ ಆನ್ಲೈನ್ ಎಫ್ಐಆರ್ ವ್ಯವಸ್ಥೆ ಅಭಿವೃದ್ಧಿಪಡಿಸಲಾಗಿದ್ದು, ನಾಳೆ (ಜ.7ರಂದು) ವಿಧಾನಸೌಧದಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ಉದ್ಘಾಟಿಸಲಿದ್ದಾರೆ.
![]()
ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣಾ ಕಾನೂನುಗಳ ಅಡಿಯಲ್ಲಿ ಅರಣ್ಯ ಅಪರಾಧ ಪ್ರಕರಣಗಳನ್ನು ನಿರ್ವಹಿಸಲು ಮತ್ತು ಪರಿಣಾಮಕಾರಿಯಾಗಿ ಮೇಲ್ವಿಚಾರಣೆ ಮಾಡಲು ಈ ತಂತ್ರಾಂಶವು ಸಹಕಾರಿಯಾಗಲಿದೆ. ಈಗಾಗಲೇ ರಾಜ್ಯ ಪೊಲೀಸ್ ಇಲಾಖೆಯಲ್ಲಿರುವಂತೆ ಅರಣ್ಯ ಇಲಾಖೆಯಲ್ಲೂ ಸಹ ಪ್ರಥಮ ವರ್ತಮಾನ ವರದಿಯನ್ನು (ಎಫ್ಐಆರ್) ಗಳನ್ನು ಆನ್ಲೈನ್ ನಲ್ಲಿ/ ಡಿಜಿಟಲ್ ಸ್ವರೂಪಕ್ಕೆ ಪರಿವರ್ತಿಸುವಂತೆ ಸಚಿವ ಈಶ್ವರ್ ಖಂಡ್ರೆ ಅವರು ಸೂಚಿಸಿದ್ದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ, ವೈಲ್ಡ್ ಲೈಫ್ ಟ್ರಸ್ಟ್ ಆಫ್ ಇಂಡಿಯಾ (WTI) ಸಹಯೋಗದೊಂದಿಗೆ ಗರುಡಾಕ್ಷಿ ತಂತ್ರಾಂಶವನ್ನು ಅಭಿವೃದ್ಧಿಪಡಿಸಿದೆ.
ಪ್ರಾಯೋಗಿಕವಾಗಿ 5 ವಿಭಾಗಗಳಲ್ಲಿ ಜಾರಿ : ಗರುಡಾಕ್ಷಿ ತಂತ್ರಾಂಶವನ್ನು ಪ್ರಾಯೋಗಿಕವಾಗಿ ಬೆಂಗಳೂರು ನಗರ ವಿಭಾಗ, ಬೆಂಗಳೂರು ಅರಣ್ಯ ಸಂಚಾರಿ ದಳ ವಿಭಾಗ, ಭದ್ರಾವತಿ ವಿಭಾಗ, ಶಿರಸಿ ವಿಭಾಗ ಮತ್ತು ಮಲೆ ಮಹದೇಶ್ವರ ವನ್ಯ ಜೀವಿ ವಿಭಾಗಗಳಲ್ಲಿ ಪ್ರಾಯೋಗಿಕವಾಗಿ (Pilot) ಜಾರಿಗೊಳಿಸಲಾಗತ್ತದೆ. ನಂತರ ಇದನ್ನು ಹಂತ ಹಂತವಾಗಿ ಎಲ್ಲ ವಿಭಾಗಕ್ಕೂ ವಿಸ್ತರಿಸಲಾಗುತ್ತದೆ ಎಂದು ಸಚಿವರು ತಿಳಿಸಿದರು.
Laxmi News 24×7