Breaking News

ಸಮುದ್ರದಲ್ಲಿ ಈಜುವಾಗ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಸುರತ್ಕಲ್ ಬಳಿ ಸಂಭವಿಸಿದೆ.

Spread the love

ಮಂಗಳೂರು: ನಗರದ ಸುರತ್ಕಲ್​ನ ಕುಳಾಯಿ ಜೆಟ್ಟಿ ಬಳಿಯ ಸಮುದ್ರ ತೀರದಲ್ಲಿ ಈಜಲು ಇಳಿದಿದ್ದ ನಾಲ್ವರು ಯುವಕರ ಪೈಕಿ ಮೂವರು ‌ಸಮುದ್ರಪಾಲಾಗಿದ್ದು, ಓರ್ವನನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ ಘಟನೆ ಇಂದು (ಬುಧವಾರ) ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ಉಪ್ಪರಿಗೇನಹಳ್ಳಿ ನಿವಾಸಿ ಮಂಜುನಾಥ್ ಎಸ್ (31), ಶಿವಮೊಗ್ಗ ಜಿಲ್ಲೆಯ ಶಿವಕುಮಾರ್ (30) ಹಾಗೂ ಬೆಂಗಳೂರು ಜೆ.ಪಿ. ನಗರದ ನಿವಾಸಿ ಸತ್ಯವೇಲು (30) ಮೃತ ವಿದ್ಯಾರ್ಥಿಗಳು. ಬೀದರ್ ಜಿಲ್ಲೆಯ ಹಂಗರಗಾ ನಿವಾಸಿ ಪರಮೇಶ್ವರ್‌ (30) ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ENGINEERING STUDENTS DROWN IN SEA

ನಾಲ್ವರು ಬೆಂಗಳೂರಿನ ಎಎಂಸಿ ಇಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ಪರಸ್ಪರ ಸ್ನೇಹಿತರಾಗಿದ್ದರು. ಇವರೆಲ್ಲರೂ ಮಂಗಳವಾರ ರಾತ್ರಿ ಕಾರಿನಲ್ಲಿ ಬೆಂಗಳೂರಿನಿಂದ ಹೊರಟು, ಇಂದು ಬೆಳಗ್ಗೆ ಮಂಗಳೂರಿಗೆ ತಲುಪಿದ್ದರು. ಮಧ್ಯಾಹ್ನದ ವೇಳೆಗೆ ಕುಳಾಯಿಜೆಟ್ಟಿ ಬಳಿಗೆ ಬಂದ ಇವರು, ಸಮುದ್ರಕ್ಕೆ ಇಳಿದು ಆಡುತ್ತಿದ್ದ ಸಂದರ್ಭದಲ್ಲಿ ನೀರುಪಾಲಾಗಿದ್ದರು.

ಯುವಕರು ಸಮುದ್ರದ ಸೆಳೆತಕ್ಕೆ ಸಿಲುಕುತ್ತಿರುವುದನ್ನು ಗಮನಿಸಿದ ಸ್ಥಳೀಯ, ಮೀನುಗಾರರು ತಕ್ಷಣ ರಕ್ಷಣೆಗೆ ಮುಂದಾಗಿದರು. ಆದರೆ ಅಷ್ಟರಲ್ಲಾಗಲೇ ಮೂವರು ನೀರುಪಾಲಾಗಿದ್ದಾರೆ. ಓರ್ವನನ್ನು ರಕ್ಷಿಸಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೂವರ ಮೃತದೇಹಗಳು ಜೆಟ್ಟಿಯ ಬಲಭಾಗದ ಮೂಲೆಯಲ್ಲಿ ಪತ್ತೆಯಾಗಿವೆ.


Spread the love

About Laxminews 24x7

Check Also

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಗಳ ಸೇರ್ಪಡೆ ವಿವಾದ – ನಿರ್ಧಾರ ಕೈಬಿಡುವಂತೆ ಸಿಎಂಗೆ ಹೆಚ್‌ಡಿಕೆ ಪತ್ರ

Spread the loveಮಂಡ್ಯ: ಜಿಲ್ಲೆಯ ಮದ್ದೂರು  ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನ ಸ್ಥಳೀಯರ ಆಶಯಗಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ