Breaking News

ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳಕ್ಕೆ ಕ್ರಮ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ

Spread the love

ಬೆಂಗಳೂರು: ರಾಜ್ಯದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ.

ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಬೇಡಿಕೆ ಹಾಗೂ ಕುಂದುಕೊರತೆಗಳ ಬಗ್ಗೆ ಸಚಿವರು ಚರ್ಚೆ ನಡೆಸಿದರು. ಗೌರವಧನ ಹೆಚ್ಚಳ, ಮುಂಬಡ್ತಿ, ಗ್ರಾಚ್ಯುಟಿ ಸೌಲಭ್ಯ, ಉಚಿತ ವೈದ್ಯಕೀಯ ಸೌಲಭ್ಯ, ಅನಾರೋಗ್ಯ ಪೀಡಿತರಿಗೆ ಸ್ವಯಂ ನಿವೃತ್ತಿ ಯೋಜನೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಚಿವರು, ವಿವಿಧ ಸಂಘಟನೆಗಳೊಂದಿಗೆ ಚರ್ಚಿಸಿದರು‌‌‌.

ಗೌರವಧನ ಹೆಚ್ಚಿಸಲು ಪ್ರಯತ್ನ : ಈ ವೇಳೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ”ನಾನು ಎಂದಿಗೂ ಅಂಗನವಾಡಿ ಕಾರ್ಯಕರ್ತೆಯರ ಪರ. ಇಡೀ‌ ದೇಶಕ್ಕೆ ನಮ್ಮ ಅಂಗನವಾಡಿಗಳು ಮಾದರಿಯಾಗಿವೆ. ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಿ, ಮುಂದಿನ ಬಜೆಟ್​ನಲ್ಲಿ ಗೌರವಧನ ಹೆಚ್ಚಿಸಲು ಪ್ರಯತ್ನಿಸಲಾಗುವುದು” ಎಂದು ತಿಳಿಸಿದರು.

ಸಭೆಯಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಶಮ್ಲಾ‌ ಇಕ್ಬಾಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರಾದ ಎನ್. ಸಿದ್ದೇಶ್ವರ್, ಸಚಿವರ ಆಪ್ತ ಕಾರ್ಯದರ್ಶಿ ಡಾ. ಟಿ.ಎಚ್. ವಿಶ್ವನಾಥ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್, ಎಐಟಿಯುಸಿ ಕಾರ್ಯದರ್ಶಿ ಎಂ.ಜ ಯಮ್ಮ, ಶಿವಶಂಕರ್, ಸಿಐಟಿಯು ಸಂಘಟನೆಯ ಸುನಂದ, ಎಐಯುಟಿಯುಸಿ ಉಮಾ, ಸ್ವತಂತ್ರ ಸಂಘಟನೆಯ ಪ್ರೇಮಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಗಳ ಸೇರ್ಪಡೆ ವಿವಾದ – ನಿರ್ಧಾರ ಕೈಬಿಡುವಂತೆ ಸಿಎಂಗೆ ಹೆಚ್‌ಡಿಕೆ ಪತ್ರ

Spread the loveಮಂಡ್ಯ: ಜಿಲ್ಲೆಯ ಮದ್ದೂರು  ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನ ಸ್ಥಳೀಯರ ಆಶಯಗಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ