Breaking News

ಡಿ.ಕೆ ಶಿವಕುಮಾರ್‌ (DK Shivakumar) ಬೇಜಾರಾಗಲು ಅವರ ಆಸ್ತಿ ಏನಾದರೂ ಬರೆಸಿಕೊಂಡಿದ್ದೇವಾ?:ಕೆಎನ್ ರಾಜಣ್ಣ

Spread the love

ತುಮಕೂರು: ಡಿ.ಕೆ ಶಿವಕುಮಾರ್‌ (DK Shivakumar) ಬೇಜಾರಾಗಲು ಅವರ ಆಸ್ತಿ ಏನಾದರೂ ಬರೆಸಿಕೊಂಡಿದ್ದೇವಾ? ಇದೆಲ್ಲ ಸುಮ್ಮನೆ ಅಷ್ಟೇ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ವಿರುದ್ಧ ಸಹಕಾರಿ ಸಚಿವ ಕೆಎನ್ ರಾಜಣ್ಣ (KN Rajanna) ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ.

ಡಿನ್ನರ್ ಪಾರ್ಟಿ ವಿಚಾರದ ಕುರಿತು ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿನ್ನರ್ ಪಾರ್ಟಿ (Dinner Party) ಕ್ಯಾನ್ಸಲ್ ಎಲ್ಲಿ ಆಗಿದೆ? ಮುಂದೂಡಿದ್ದೇವೆ ಅಷ್ಟೇ, ಕ್ಯಾನ್ಸಲ್ ಇಲ್ಲ. ಈಗಾಗಲೇ ಈ ಬಗ್ಗೆ ಪರಮೇಶ್ವರ್ ಹೇಳಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಮೊನ್ನೆ ನಡೆದಿರುವ ಡಿನ್ನರ್ ಪಾರ್ಟಿ ಬಗ್ಗೆ ಗೊಂದಲ ಆಗಿದೆ. ಆ ಗೊಂದಲದ ಜೊತೆಗೆ ಇನ್ನೊಂದು ಗೊಂದಲ ಆಗೋದು ಬೇಡ.

ಅದನ್ನು ಮುಂದೂಡಬೇಕು ಅಂತ ಹೇಳಿದೆ, ಅದಕ್ಕೆ ಮುಂದೂಡಿದ್ದೇವೆ ಎಂದರು. ಪ್ರೀ ಯೂನಿವರ್ಸಿಟಿಗಳಲ್ಲಿ ಎಸ್ಸಿ, ಎಸ್ಟಿ ಮಕ್ಕಳಿಗೆ ಹಾಸ್ಟೆಲ್ ಸೀಟು ಸಿಗುತ್ತಿಲ್ಲ. ಜೊತೆಗೆ ಮ್ಯಾನೇಜ್‌ಮೆಂಟ್ ಸೀಟ್ ಪಡೆದ ಎಸ್ಸಿ, ಎಸ್ಟಿ ಮಕ್ಕಳಿಗೆ ಸ್ಕಾಲರ್ಶಿಪ್ ಸಿಗುತ್ತಿಲ್ಲ, ಹಾಸ್ಟೆಲ್ ಕೊಡುತ್ತಿಲ್ಲ. ಇಂತಹ ವಿಚಾರಗಳ ಬಗ್ಗೆ ನಾವು ಚರ್ಚೆ ಮಾಡಲು ಮೀಟಿಂಗ್ ಕರೆದರೆ ಮಾಡಬೇಡಿ ಎನ್ನುತ್ತಾರೆ. ಇವರೆಲ್ಲಾ ಏನು ಎಸ್ಸಿ ಎಸ್ಟಿಗಳ ವಿರೋಧಿಗಳಾ? ಇವೆಲ್ಲಾ ಬಹಳಷ್ಟು ದಿನ ನಡೆಯಲ್ಲ. ಹಾಸ್ಟೆಲ್ ಸೀಟ್ ಸಿಗಲ್ಲ. ಸಣ್ಣಪುಟ್ಟ ಸಾಲ ಮಾಡಿ ಮ್ಯಾನೇಜ್ಮೆಂಟ್ ಕೋಟಾದಲ್ಲಿ ಸೀಟು ತೆಗೆದುಕೊಂಡವನಿಗೆ ಸ್ಕಾಲರ್ಶಿಪ್ ಇಲ್ಲ. ಇದು ಎಸ್ಸಿ, ಎಸ್ಟಿ ಮಕ್ಕಳ ಜ್ವಲಂತ ಸಮಸ್ಯೆ. ಇಂತಹ ಹತ್ತು ಹಲವಾರು ಸಮಸ್ಯೆಗಳಿವೆ. ಈ ಬಗ್ಗೆ ಚರ್ಚೆ ಮಾಡಲು ಮೀಟಿಂಗ್ ಕರೆದರೆ ಇದಕ್ಕೆ ರಾಜಕೀಯ ಬಣ್ಣ ಕೊಟ್ಟು ಮಾಡಬೇಡಿ ಎಂದು ಹೇಳುತ್ತಾರೆ. ಇದು ಎಸ್ಸಿ, ಎಸ್ಟಿ ಸಮಾಜಕ್ಕೆ ಮಾಡುವ ಅನ್ಯಾಯ ಎಂದು
ಕಿಡಿಕಾರಿದರು

ಡಿನ್ನರ್ ವಿಚಾರ ಮುಂದೆ ಮೀಟಿಂಗ್ ಮಾಡಿ ಡೇಟ್ ತಿಳಿಸುತ್ತೇವೆ. ಮುಂದಿನ ತಿಂಗಳ 14ನೇ ತಾರೀಕು ಎಂಎಂ ಹಿಲ್ಸ್‌ನಲ್ಲಿ ಕ್ಯಾಬಿನೆಟ್ ನಡೆಯುತ್ತದೆ. ಚಾಮರಾಜನಗರ ಜಿಲ್ಲೆ ಹೋದರೆ ಮುಖ್ಯಮಂತ್ರಿ, ಸಚಿವ ಸ್ಥಾನ ಹೋಗುತ್ತದೆ ಎಂದು ಹೇಳುತ್ತಿದ್ದಾರೆ. ಅಷ್ಟರೊಳಗೆ ಸಭೆ ಮಾಡುತ್ತೇವೆ. ಇಲ್ಲ ಅಂದರೆ ಕ್ಯಾಬಿನೆಟ್ ಮೀಟಿಂಗ್ ಬಳಿಕ ಸಭೆ ಮಾಡಿ ತಿಳಿಸುತ್ತೇವೆ ಎಂದರು.


Spread the love

About Laxminews 24x7

Check Also

ಫೆ.9ರಿಂದ ಮೆಟ್ರೋ ದರ ಏರಿಕೆಗೆ ಸರ್ಕಾರ ಒಪ್ಪಿಗೆ?

Spread the loveಬೆಂಗಳೂರು: ಮೆಟ್ರೋ  ಪ್ರಯಾಣಿಕರಿಗೆ ಮತ್ತೊಮ್ಮೆ ಶಾಕ್ ಎದುರಾಗಿದೆ. ಫೆಬ್ರವರಿ 9ರಿಂದ ಮತ್ತೆ ಮೆಟ್ರೋ ದರ ಏರಿಕೆಯಾಗುವ ಸಾಧ್ಯತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ