ಬೆಂಗಳೂರು: ಮೈಸೂರು ಕೇಂದ್ರ ಕಾರಾಗೃಹದಲ್ಲಿ ಕೇಕ್ ತಯಾರಿಕೆಗೆ ಬಳಸಲಾಗುವ ಸುಗಂಧದ್ರವ್ಯ (ಎಸೆನ್ಸ್) ಸೇವಿಸಿ ಮೂವರು ಸಜಾ ಕೈದಿಗಳು ಸಾವನ್ನಪ್ಪಿರುವ ಪ್ರಕರಣವನ್ನು ಕಾರಾಗೃಹ ಹಾಗೂ ಸುಧಾರಣಾ ಸೇವಾ ಇಲಾಖೆಯು ಗಂಭೀರವಾಗಿ ಪರಿಗಣಿಸಿದ್ದು, ಭವಿಷ್ಯದಲ್ಲಿ ಇಂತಹ ಘಟನೆ ಮರುಕಳಿಸದಿರಲು ರಾಜ್ಯದ ಎಲ್ಲಾ ಜೈಲುಗಳಿಗೆ ನಿರ್ದೇಶನ ನೀಡಿದೆ.
ಬೆಂಗಳೂರು, ಶಿವಮೊಗ್ಗ, ಕಲಬುರಗಿ, ಬೆಳಗಾವಿ ಸೇರಿದಂತೆ ಇತರ ರಾಜ್ಯ ಹಾಗೂ ಜಿಲ್ಲಾ ಕಾರಾಗೃಹಗಳ ಅಧೀಕ್ಷಕರಿಗೆ ಮುಂಜಾಗ್ರತ ಕ್ರಮ ಕೈಗೊಳ್ಳುವಂತೆ ಇಲಾಖೆ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಅವರು ನಿರ್ದೇಶನ ನೀಡಿದ್ದಾರೆ.
ನಿಗಾ ವಹಿಸುವಂತೆ ಸೂಚನೆ: ಕಾರಾಗೃಹದಲ್ಲಿನ ಬೇಕರಿ ವಿಭಾಗದಲ್ಲಿ ಕೇಕ್ ತಯಾರಿಸಲು ಎಸೆನ್ಸ್ ಬಳಕೆ ಮಾಡಲಾಗುತ್ತಿದೆ. ಕೇಕ್ ತಯಾರಿಸುವ ಕೈದಿಗಳ ಬಗ್ಗೆ ಎಚ್ಚರ ವಹಿಸಬೇಕು. ನಿಗದಿತ ಕೈದಿಗಳನ್ನ ಹೊರತುಪಡಿಸಿದರೆ ವಿವಿಧ ಜವಾಬ್ದಾರಿ ವಹಿಸಿಕೊಂಡಿರುವ ಹಾಗೂ ವಿವಿಧ ಬ್ಯಾರಕ್ನಲ್ಲಿನ ಕೈದಿಗಳಿಗೆ ಪ್ರವೇಶ ನಿರ್ಬಂಧ ಕಠಿಣಗೊಳಿಸಬೇಕು. ಬೇಕರಿ ಉತ್ಪನ್ನದಲ್ಲಿ ತೊಡಗಿರುವ ಕೈದಿಗಳು ಕೆಲಸ ಸಮಯದಲ್ಲಿ ಮಾತ್ರ ಇರಬೇಕು. ಕೆಲಸ ಅವಧಿ ಮುಗಿದ ಬಳಿಕ ವಿಭಾಗಕ್ಕೆ ಯಾರು ಹೋಗದಿರಲು ನಿಗಾ ವಹಿಸಬೇಕು ಎಂದು ಸೂಚನೆ ನೀಡಲಾಗಿದೆ.
Laxmi News 24×7