Breaking News

ಕರ್ನಾಟಕ ಕಾಂಗ್ರೆಸ್​ನಲ್ಲಿ ಡಿನ್ನರ್ ಮತ್ತು ಡಿಶುಂ ಡಿಶುಂ ಪಾಲಿಟಿಕ್ಸ್

Spread the love

ಬೆಂಗಳೂರು, ಜನವರಿ 12: ಕರ್ನಾಟಕ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಎಷ್ಟೇ ಒಗ್ಗಟ್ಟಿನ ಬಲ ಪ್ರದರ್ಶನ ತೋರಿದರೂ ಅದರ ಒಳಬೇಗುದಿ ಮತ್ತು ಆಂತರಿಕ ಕಚ್ಚಾಟ ಆಗಾಗ್ಗೆ ಬಹಿರಂಗಗೊಳ್ಳುತ್ತಲೇ ಇರುತ್ತದೆ. ಕೆಲ ದಿನಗಳ ಹಿಂದೆ ಸತೀಶ್ ಜಾರಕಿಹೊಳಿ ಮನೆಯಲ್ಲಿ ಕೆಲ ನಾಯಕರು ಸಿಎಂ ಜೊತೆ ಡಿನ್ನರ್​ನಲ್ಲಿ ಪಾಲ್ಗೊಂಡಿದ್ದು ಸಾಕಷ್ಟು ಹುಬ್ಬೇರಿಸಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರ ಬಣಗಳ ನಡುವಿನ ಕಚ್ಚಾಟವು ಜಾತಿ ಸ್ವರೂಪದಂತಹ ಅತಿರೇಕಕ್ಕೆ ಹೋಗಿದೆ. ಇದು ಈಗ ರಾಜ್ಯ ಕಾಂಗ್ರೆಸ್​ನ ಹಿರಿಯ ನಾಯಕರ ಆತಂಕಕ್ಕೆ ಕಾರಣವಾಗಿದೆ.

ಬಹಿರಂಗವಾಗಿ ಅಸಮಾಧಾನ ಹೊರಹಾಕುತ್ತಿರುವುದರಿಂದ ಪ್ರತಿಪಕ್ಷಗಳಿಗೆ ತಾವೇ ಅಸ್ತ್ರ ಕಟ್ಟಂಗೆ ಆಗುತ್ತದೆ. ಹಿರಿಯ ನಾಯಕರೇ ಈ ರೀತಿ ಬಹಿರಂಗವಾಗಿ ಟೀಕೆಗಳನ್ನು ಮಾಡಿದರೆ ಪಕ್ಷಕ್ಕೆ ಹಾನಿಯಾಗುವುದು ನಿಶ್ಚಿತ. ಇದಕ್ಕೆ ಕಡಿವಾಣ ಹಾಕದಿದ್ದರೆ ಸರ್ಕಾರದ ವರ್ಚಸ್ಸಿಗೆ ಧಕ್ಕೆ ಆಗಲಿದೆ ಎಂದು ಕೆಲ ಹಿರಿಯ ನಾಯಕರು ಬೇಸರ ಹೊರಹಾಕಿರುವುದು ತಿಳಿದುಬಂದಿದೆ.

ಮೊನ್ನೆ ಡಿಸಿಎಂ ಜೊತೆ ನಡೆದ ಸಭೆಯಲ್ಲಿ ಹಿರಿಯ ನಾಯಕರು ಈ ಆತಂಕ ತೋಡಿಕೊಂಡಿದ್ದರು. ಜನವರಿ 16, ಗುರುವಾರ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲಿರುವ ಈ ನಾಯಕರು ಇದೇ ವಿಚಾರವನ್ನು ಪ್ರಸ್ತಾಪಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ