ಬೆಂಗಳೂರು, ಜನವರಿ 12: ಕರ್ನಾಟಕ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಎಷ್ಟೇ ಒಗ್ಗಟ್ಟಿನ ಬಲ ಪ್ರದರ್ಶನ ತೋರಿದರೂ ಅದರ ಒಳಬೇಗುದಿ ಮತ್ತು ಆಂತರಿಕ ಕಚ್ಚಾಟ ಆಗಾಗ್ಗೆ ಬಹಿರಂಗಗೊಳ್ಳುತ್ತಲೇ ಇರುತ್ತದೆ. ಕೆಲ ದಿನಗಳ ಹಿಂದೆ ಸತೀಶ್ ಜಾರಕಿಹೊಳಿ ಮನೆಯಲ್ಲಿ ಕೆಲ ನಾಯಕರು ಸಿಎಂ ಜೊತೆ ಡಿನ್ನರ್ನಲ್ಲಿ ಪಾಲ್ಗೊಂಡಿದ್ದು ಸಾಕಷ್ಟು ಹುಬ್ಬೇರಿಸಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರ ಬಣಗಳ ನಡುವಿನ ಕಚ್ಚಾಟವು ಜಾತಿ ಸ್ವರೂಪದಂತಹ ಅತಿರೇಕಕ್ಕೆ ಹೋಗಿದೆ. ಇದು ಈಗ ರಾಜ್ಯ ಕಾಂಗ್ರೆಸ್ನ ಹಿರಿಯ ನಾಯಕರ ಆತಂಕಕ್ಕೆ ಕಾರಣವಾಗಿದೆ.
ಬಹಿರಂಗವಾಗಿ ಅಸಮಾಧಾನ ಹೊರಹಾಕುತ್ತಿರುವುದರಿಂದ ಪ್ರತಿಪಕ್ಷಗಳಿಗೆ ತಾವೇ ಅಸ್ತ್ರ ಕಟ್ಟಂಗೆ ಆಗುತ್ತದೆ. ಹಿರಿಯ ನಾಯಕರೇ ಈ ರೀತಿ ಬಹಿರಂಗವಾಗಿ ಟೀಕೆಗಳನ್ನು ಮಾಡಿದರೆ ಪಕ್ಷಕ್ಕೆ ಹಾನಿಯಾಗುವುದು ನಿಶ್ಚಿತ. ಇದಕ್ಕೆ ಕಡಿವಾಣ ಹಾಕದಿದ್ದರೆ ಸರ್ಕಾರದ ವರ್ಚಸ್ಸಿಗೆ ಧಕ್ಕೆ ಆಗಲಿದೆ ಎಂದು ಕೆಲ ಹಿರಿಯ ನಾಯಕರು ಬೇಸರ ಹೊರಹಾಕಿರುವುದು ತಿಳಿದುಬಂದಿದೆ.
ಮೊನ್ನೆ ಡಿಸಿಎಂ ಜೊತೆ ನಡೆದ ಸಭೆಯಲ್ಲಿ ಹಿರಿಯ ನಾಯಕರು ಈ ಆತಂಕ ತೋಡಿಕೊಂಡಿದ್ದರು. ಜನವರಿ 16, ಗುರುವಾರ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲಿರುವ ಈ ನಾಯಕರು ಇದೇ ವಿಚಾರವನ್ನು ಪ್ರಸ್ತಾಪಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
Laxmi News 24×7