Breaking News

ಔಡಲ ಗಿಡದ ಕಾಯಿ ತಿಂದು ಅಸ್ವಸ್ಥರಾಗಿ ಮಕ್ಕಳು ಆಸ್ಪತ್ರೆಗೆ ದಾಖಲ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ ಲಾಡ್

Spread the love

ಧಾರವಾಡ: ಔಡಲ ಗಿಡದ ಕಾಯಿ ತಿಂದು ಅಸ್ವಸ್ಥರಾಗಿ ಮಕ್ಕಳು ಆಸ್ಪತ್ರೆಗೆ ದಾಖಲಾಗಿದ್ದು, ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಸಚಿವ ಸಂತೋಷ್​ ಲಾಡ್ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು.

ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಗಂಭ್ಯಾಪುರ ಗ್ರಾಮದಲ್ಲಿ‌ ನಿನ್ನೆ ಸಂಜೆ ಶಾಲೆಯಿಂದ ಬರುತ್ತಿದ್ದ ವಿದ್ಯಾರ್ಥಿಗಳು ದಾರಿಯಲ್ಲಿ ಔಡಲ ಗಿಡದ ಕಾಯಿ ತಿಂದು ಅಸ್ವಸ್ಥರಾಗಿದ್ದರು. ಬಳಿಕ ರಾತ್ರಿ ವಾಂತಿ ಬೇದಿಯಿಂದ ಬಳಲಿದ್ದು, ಪೋಷಕರು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ್ದರು.

ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಆಸ್ಪತ್ರೆಗೆ ಭೇಟಿ‌ ನೀಡಿ‌ ವಿದ್ಯಾರ್ಥಿಗಳ ಯೋಗಕ್ಷೇಮ ವಿಚಾರಿಸಿದರು.ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, “ಜಟ್ರೊಬಾ ಎಂಬ ಗಿಡದ ಕಾಯಿ ತಿಂದು ನನ್ನ ಕ್ಷೇತ್ರದ ಗಂಭ್ಯಾಪುರ ಗ್ರಾಮದ 13 ಮಕ್ಕಳು ಅಸ್ವಸ್ಥರಾಗಿದ್ದರು. ಅವರಲ್ಲಿ 10 ಮಕ್ಕಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಎಲ್ಲ ಮಕ್ಕಳು ಸುರಕ್ಷಿತರಾಗಿದ್ದಾರೆ. ಯಾವುದೇ ರೀತಿಯ ಅನಾಹುತ ಆಗಿಲ್ಲ” ಎಂದು ಹೇಳಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ