Breaking News

ವಿಶ್ವವನ್ನೇ ಬೆರಗುಗೊಳಿಸಿದ ವೀರ ಸನ್ಯಾಸಿ ವಿವೇಕಾನಂದರು: ವಿವೇಕ ಜತ್ತಿ ಗೋಕಾಕದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ

Spread the love

ವಿಶ್ವವನ್ನೇ ಬೆರಗುಗೊಳಿಸಿದ ವೀರ ಸನ್ಯಾಸಿ ವಿವೇಕಾನಂದರು: ವಿವೇಕ ಜತ್ತಿ
ಗೋಕಾಕದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ

ಗೋಕಾಕ: ನಗರದ ಹಿಲ್‌ ಗಾರ್ಡನ್‌ ಕಚೇರಿಯಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ ಆಚರಿಸಲಾಯಿತು. ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.

ಈ ವೇಳೆ ಕಾಂಗ್ರೆಸ್‌ ಮುಖಂಡ ವಿವೇಕ ಜತ್ತಿ ಮಾತನಾಡಿ,
“ವಿವೇಕನಾಂದರು ಹೊಂದಿರುವ ಜ್ಞಾನವನ್ನು ಮತ್ತೆ ಯಾರೂ ಹೊಂದಿರಲಿಲ್ಲ. ಅದಕ್ಕೆ ಅವರನ್ನು ತಿಳಿದುಕೊಳ್ಳಬೇಕೆಂದರೆ ಮತ್ತೊಬ್ಬ ವಿವೇಕಾನಂದರು ಹುಟ್ಟ ಬೇಕಾಗುತ್ತದೆ” ಎಂದು ಹೇಳಿದರು.

ಭಾರತದ ಅತ್ಯಂತ ಪ್ರಭಾವಶಾಲಿ ಮತ್ತು ಪೂಜ್ಯ ಆಧ್ಯಾತ್ಮಿಕ ನಾಯಕರಲ್ಲಿ ಒಬ್ಬರಾದ ಸ್ವಾಮಿ ವಿವೇಕಾನಂದರ ಜನ್ಮದಿನವನ್ನು
ಏಳಿ ಎದ್ದೇಳಿ… ಗುರಿ ಮುಟ್ಟುವ ತನಕ ನಿಲ್ಲದಿರಿ’. ಈ ಸಾಲುಗಳಲ್ಲಿಯೇ ಅದ್ಭುತ ಶಕ್ತಿ ಇದೆ. ಈ ಪದಗಳು ಕಿವಿಗೆ ಬೀಳುತ್ತಿದ್ದಂತೆಯೇ ದೇಹ ಮನಸ್ಸಿನಲ್ಲಿ ವಿದ್ಯುತ್ಸಂಚಾರವಾದಂತಾಗುತ್ತದೆ ಎಂದು ಹೇಳಿದರು.

ನಮ್ಮ ದೇಶ ಕಂಡ ಅಪ್ರತಿಮ ಆಧ್ಯಾತ್ಮಿಕ ನಾಯಕ, ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ ಮಾತುಗಳಿವುಗಳು. ವಿಶ್ವವನ್ನೇ ಬೆರಗುಗೊಳಿಸಿದ ಮಹಾನ್ ಸಂತರಿವರು. ಅದ್ಭುತ ತತ್ವಜ್ಞಾನಿ, ಸಮಾಜ ಸುಧಾರಕ, ಮಹಾನ್ ದೇಶಭಕ್ತ ಮತ್ತು ಶ್ರೇಷ್ಠ ವಾಗ್ಮಿ ವಿವೇಕಾನಂದರ ಮಾತುಗಳು ಇಂದಿಗೂ ಪ್ರಸ್ತುತ. ಇವರ ಮಾತುಗಳು ಎಲ್ಲರಿಗೂ ಸ್ಫೂರ್ತಿ ಎಂದರು.

ಈ ಸಂದರ್ಭದಲ್ಲಿ ವ್ಹಿ.ಆರ್‌.ಪರಸನ್ನವರ, ಬಸವರಾಜ ಜತ್ತಿ, ಸುರೇಶ , ಪಾಂಡು ರಂಗಸುಭೆ ಹಾಗೂ ಇತರರು ಇದ್ದರೂ


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ