Breaking News

ಕೆಪಿಸಿಸಿಗೆ ಪೂರ್ಣ ಪ್ರಮಾಣದ ಹೊಸ ಅಧ್ಯಕ್ಷರನ್ನು ಆದಷ್ಟು ಬೇಗ ನೇಮಕ ಮಾಡಲಿ: ಸಚಿವ ಸತೀಶ್ ಜಾರಕಿಹೊಳಿ

Spread the love

ಬೆಂಗಳೂರು: ಶಾಸಕಾಂಗ ಸಭೆ ಬಳಿಕವೂ ಕಾಂಗ್ರೆಸ್​ ನಾಯಕರ ಅಸಮಾಧಾನಗಳು ಕಡಿಮೆಯಾಗಿಲ್ಲ ಎಂಬುದಕ್ಕೆ ಇದೀಗ ಸತೀಶ್​ ಜಾರಕಿಹೊಳಿ ಹೇಳಿಕೆ ಸಾಕ್ಷಿಯಾಗಿದೆ. ಡಿಕೆ ಶಿವಕುಮಾರ್​ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿರುವ ಅವರು, ಕೆಪಿಸಿಸಿಗೆ ಜನಪ್ರಿಯ ನಾಯಕನನ್ನು ಅಧ್ಯಕ್ಷರನ್ನಾಗಿ ಮಾಡಿ ಎಂದು ರಾಜ್ಯ ಕಾಂಗ್ರೆಸ್​ ಉಸ್ತುವಾರಿ ಸುರ್ಜೇವಾಲಾ ಅವರಿಗೆ ತಿಳಿಸಿದ್ದೇನೆ ಎಂದು ಲೋಕೋಪಯೋಗಿ ಸಚಿವ ಸತೀಶ್​ ಜಾರಕಿಹೊಳಿ ತಿಳಿಸಿದ್ದಾರೆ.

ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ನನ್ನನ್ನು ನಾನು ಕೆಪಿಸಿಸಿ ಅಧ್ಯಕ್ಷರಾಗಿ ಎಂದು ಮಾಡಿ ಎಂದು ಹೇಳಿಲ್ಲ. ನಾವುಗಳೆಲ್ಲ ಸಚಿವರಾದ ಮೇಲೆ ಪಕ್ಷಕ್ಕೆ ಸಮಯ ಕೊಡುವುದು ಕಡಿಮೆಯಾಗಿದೆ. 2023ರಲ್ಲಿ ಇದ್ದ ವೇಗ ಈಗ ಇಲ್ಲ, ಹಾಗಾಗಿ ಹೊಸ ಅಧ್ಯಕ್ಷರ ನೇಮಕ ಆಗಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ. ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ. ಶಿವಕುಮಾರ್ ಅವರು ಮುಂದುವರೆಯಬೇಕಾ, ಬೇರೆಯವರು ಅಧ್ಯಕ್ಷರಾಗಬೇಕಾ? ಎಂಬುದು ಪಕ್ಷದ ಹೈಕಮಾಂಡ್ ಮಟ್ಟದಲ್ಲಿ ಚರ್ಚೆಯಾಗಬೇಕು. ಹೈಕಮಾಂಡ್ ಸಹ ಈ ಬಗ್ಗೆ ತೀರ್ಮಾನ ಬೇಗ ಮಾಡಬೇಕು ಎಂದು ಒತ್ತಾಯಿಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ