Breaking News

ರಾಷ್ಟ್ರೀಯ ಹೆದ್ದಾರಿ 50ರಲ್ಲಿ ತಮಿಳು ನಾಡು ಮೂಲದ ಲಾರಿಯು ಬೆಂಕಿಗಾಹುತಿಯಾಗಿದೆ.

Spread the love

ಬಳ್ಳಾರಿ: ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹುಲಿಕೇರಿ ಗ್ರಾಮದ ಬಳಿ ಇಂದು ಸಂಜೆ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ತಮಿಳು ನಾಡು ಮೂಲದ ಲಾರಿಯು ಬೆಂಕಿಗಾಹುತಿಯಾಗಿದೆ.

ಲಾರಿ ಚಿತ್ರದುರ್ಗದಿಂದ ಕೂಡ್ಲಿಗಿ ಕಡೆಗೆ ತೆರಳುತ್ತಿತ್ತು. ಕಬ್ಬಿಣ ತುಂಬಿದ ಲಾರಿಯ ಇಂಜೀನ್‍ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ನೋಡ ನೋಡುತ್ತಿದ್ದಂತೆ, ಲಾರಿಯು ಧಗ ಧಗನೆ ಹುರಿದು ಭಾರೀ ಜ್ವಾಲೆ ಹಬ್ಬಿದೆ. ಇದನ್ನು ಗಮನಿಸಿದ ಚಾಲಕ ಹಾಗೂ ಕ್ಲೀನರ್ ಲಾರಿಯಿಂದ ಕೆಳಗೆ ಧುಮುಕಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ವಿಷಯ ತಿಳಿದು ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಅಗ್ನಿಯನ್ನು ನಂದಿಸುವಲ್ಲಿ ವಿಫಲವಾಗಿದ್ದಾರೆ. ಪರಿಣಾಮ ಲಾರಿ ಸಂಪೂರ್ಣ ಸುಟ್ಟು ಕರಕಲಾಗಿಗೆ. ತಡವಾಗಿ ವಿಷಯ ತಿಳಿದ ಕಾರಣ, ಲೇಟ್ ಆಗಿ ಬಂದ ಅಗ್ನಿ ಶಾಮಕ ಠಾಣಾ ಸಿಬ್ಬಂದಿ ಲಾರಿ ಸುಟ್ಟ ನಂತರ ಅಗ್ನಿ ನಂದಿಸಿದ್ದಾರೆ.


Spread the love

About Laxminews 24x7

Check Also

ಬಳ್ಳಾರಿ ಬಾಣಂತಿಯರ ಸಾವಿಗೆ ಔಷಧ ಮಾತ್ರ ಕಾರಣವಲ್ಲ: ರಾಜ್ಯ ಮಹಿಳಾ ಆಯೋಗ

Spread the loveಬಳ್ಳಾರಿ, ಡಿಸೆಂಬರ್​ 14: ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ (BIMS) ಬಾಣಂತಿಯರ ಸಾವಿಗೆ ಕೇವಲ IV ರಿಂಗರ್ ಲ್ಯಾಕ್ಟೇಟ್ ದ್ರಾವಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ