ಬೆಳಗಾವಿ: ಜಿಲ್ಲೆಯ ಅಂಕಲಗಿ ಗ್ರಾಮದಲ್ಲಿ ಸಾರ್ವಜನಿಕ ಸಭೆಯೊಂದನ್ನು ಉದ್ದೇಶಿಸಿ ಮಾತಾಡಿದ ಶಾಸಕ ರಮೇಶ್ ಜಾರಕಿಹೊಳಿ ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಸವಾಲೆಸೆದರು.
ಬಸನಗೌಡ ಪಾಟೀಲ್ ಮತ್ತು ಜಾರಕಿಹೊಳಿ ವಿಜಯೇಂದ್ರ ವಿರುದ್ಧ ಬೆಂಕಿಯುಗುಳುತ್ತಿದ್ದಾರೆ. ಓಡಾಡುವುದು ಕಷ್ಟವಾಗುತ್ತೆ ಅಂತ ವಿಜಯೇಂದ್ರ ಜಾರಕಿಹೊಳಿಗೆ ಹೇಳಿದ್ದು ಇಬ್ಬರಿಗೂ ಸಹ್ಯವಾಗುತ್ತಿಲ್ಲ.
ತಾನು ಶಿಕಾರಿಪುರಕ್ಕೆ ಹೋಗಿ ವಿಜಯೇಂದ್ರ ಮನೆ ಮುಂದಿನಿಂದಲೇ ರಾಜ್ಯ ಪ್ರವಾಸ ಶುರುಮಾಡುತ್ತೇನೆ, ತಾನೊಬ್ಬನೇ ಅಲ್ಲಿಗೆ ಹೋಗುತ್ತೇನೆ, ದಿನಾಂಕವನ್ನು ವಿಜಯೇಂದ್ರನೇ ನಿಗದಿ ಮಾಡಲಿ ಎಂದು ಜಾರಕಿಹೊಳಿ ಸವಾಲೆಸೆದರು. ಪಕ್ಷದ ಅಧ್ಯಕ್ಷ ಸ್ಥಾನದ ಬಗ್ಗೆ ತನಗೆ ಗೌವವಿದೆಯೇ ಹೊರತು ವಿಜಯೇಂದ್ರ ಬಗ್ಗೆ ಇಲ್ಲ ಎಂದು ಗೋಕಾಕ ಶಾಸಕ ಹೇಳಿದರು.
Laxmi News 24×7